ಅಜೇಯ 111 ರನ್
51ಎಸೆತ
11 ಬೌಂಡರಿ
07ಸಿಕ್ಸರ್
ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ-೨೦ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಛೋಟಕ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಕೇವಲ ೪೯ ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಾಂ ಪರ ಸೂರ್ಯಕುಮಾರ್ ಯಾದವ್ ಕಿವೀಸ್ ಬೌಲರ್ಗಳನ್ನು ದಂಡಿಸಿದರು. ಪಂದ್ಯದಲ್ಲಿ ಅಜೇಯರಾಗಿ ಉಳಿದ ಸೂರ್ಯಕುಮಾರ್ ೫೧ ಎಸೆತಗಳಲ್ಲಿ ೧೧೧ ರನ್ ಬಾರಿಸಿದ್ದರು.
ಅದ್ಭುತ ಫಾರ್ಮ್ನಲ್ಲಿರುವ ಸೂರ್ಯಕುಮಾರ್ ಯಾದವ್ (ಅಜೇಯ ೧೧೧) ಅವರ ಶತಕದಿಂದಾಗಿ ನ್ಯೂಜಿಲೆಂಡ್ ವಿರುದ್ಧ ಭಾರತ ೬ ವಿಕೆಟ್ ನಷ್ಟಕ್ಕೆ ೧೯೧ ರನ್ ಪೇರಿಸಿದೆ. ಸೂರ್ಯಕುಮಾರ್ ತಮ್ಮ ಎರಡನೇ ಟಿ-೨೦ ಅಂತಾರಾಷ್ಟ್ರೀಯ ಶತಕಕ್ಕಾಗಿ ೪೯ ಎಸೆತಗಳನ್ನು ತೆಗೆದುಕೊಂಡರು. ಇದರಲ್ಲಿ ೧೧ ಬೌಂಡರಿ ಮತ್ತು ೭ ಸಿಕ್ಸರ್ಗಳು ಸೇರಿವೆ.
ಇನ್ನು ಟಿ-೨೦ ಕ್ರಿಕೆಟ್ ಲ್ಲಿ ಭಾರತದ ಪರ ಎರಡು ಶತಕ ಸಿಡಿಸಿದ ಖ್ಯಾತಿಗೆ ಸೂರ್ಯಕುಮಾರ್ ಯಾದವ್ ಭಾಜನರಾದರು. ರೋಹಿತ್ ಶರ್ಮಾ ಭಾರತದ ಪರ ವೇಗದ ಶತಕ ಸಿಡಿಸಿ ಅಗ್ರ ಬ್ಯಾಟ್ಸ್ಮನ್ ಆಗಿದ್ದಾರೆ. ಶ್ರೀಲಂಕಾ ವಿರುದ್ಧ ೩೫ ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ನಂತರ ಸ್ಥಾನದಲ್ಲಿ ಕೆ.ಎಲ್.ರಾಹುಲ್ ಇದ್ದಾರೆ. ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ೪೬ ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಟ-೨೦ ಅಂತಾರಾಷ್ಟ್ರೀುಂ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ೧೨೨, ರೋಹಿತ್ ಶವಾ ೧೧೮, ಸೂರ್ಯಕುಮಾರ್ ಯಾದವ್ ೧೧೭ ಭಾರತ ಪರ ಅತ್ಯಧಿಕ ರನ್ ಸಿಡಿಸಿದ ಬ್ಯಾಟ್ಸ್ಮನ್ಗಳಾಗಿದ್ದಾರೆ.
ಟಿ-೨೦ ಅತಿಹೆಚ್ಚು ರನ್ ಗಳಿಸಿದವರು
* ೨೦೧೭ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ೧೧೮ ರನ್ (೧೦೦ ರನ್-೩೫ ಎಸೆತ)
* ಕೆ.ಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ೧೧೭ ರನ್ (೧೦೦ ರನ್-೪೬ ಎಸೆತ)
* ೨೦೨೨ ಸೂರ್ಯಕುಮಾರ್ ನ್ಯೂಜಿಲೆಂಡ್ ವಿರುದ್ಧ ೧೧೧ ರನ್ (೧೦೦ ರನ್-೪೯ ಎಸೆತ)
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…