ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 ಆರೋಪಿಗಳಲ್ಲಿ ಸುಶೀಲ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.
ಸಾಮಾನ್ಯವಾಗಿ ತಿಹಾರ್ ಜೈಲಿನ ನಂ.4 ಗೇಟ್ ಅನ್ನು ಕೈದಿಗಳ ಬಿಡುಗಡೆಗೆ ಬಳಸಲಾಗುತ್ತದೆ. ಆದರೆ ಭದ್ರತಾ ಕಾರಣಗಳಿಗಾಗಿ ಸುಶೀಲ್ ಕುಮಾರ್ ಅವರನ್ನು ಪ್ರತ್ಯೇಕ ಗೇಟ್ನಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ಸಂಜೆಯೇ ಅವರ ಬಿಡುಗಡೆ ವಾರಂಟ್ ತಿಹಾರ್ ಜೈಲಿಗೆ ತಲುಪಿತ್ತು.ಬೆನ್ನು ನೋವಿನಿಂದ ಬಳಲುತ್ತಿರುವ ಸುಶೀಲ್ ಕುಮಾರ್ ಪತ್ನಿಗೆ ಶಸ್ತ್ರಚಿಕಿತ್ಸೆಯಿದ್ದು, ಪತ್ನಿಯನ್ನು ಭೇಟಿ ಮಾಡಲು ಅವಕಾಶ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಕಣ್ಗಾವಲು ಇಡುವಂತೆ ನ್ಯಾಯಾಲಯ ಸೂಚಿಸಿದೆ. ಸುಶೀಲ್ ಕುಮಾರ್ ಪತ್ನಿಗೆ ನವೆಂಬರ್ 7 ರಂದು ಶಸ್ತ್ರಚಿಕಿತ್ಸೆ ನಿಗದಿಪಡಿಸಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಸುಶೀಲ್ ಕುಮಾರ್ ಅವರಿಗೆ ನವೆಂಬರ್ 12 ರವರೆಗೆ ಮಧ್ಯಂತರ ಜಾಮೀನು ನೀಡಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅಂದರೆ ನವೆಂಬರ್ 13 ರಂದು ಸಂಬಂಧಪಟ್ಟ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…