ಕ್ರೀಡೆ

ತಿಹಾರ್​ ಜೈಲಿನಿಂದ ಕುಸ್ತಿಪಟು ಸುಶೀಲ್​ ಕುಮಾರ್ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 ಆರೋಪಿಗಳಲ್ಲಿ ಸುಶೀಲ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.

ಸಾಮಾನ್ಯವಾಗಿ ತಿಹಾರ್​ ಜೈಲಿನ ನಂ.4 ಗೇಟ್​ ಅನ್ನು ಕೈದಿಗಳ ಬಿಡುಗಡೆಗೆ ಬಳಸಲಾಗುತ್ತದೆ. ಆದರೆ ಭದ್ರತಾ ಕಾರಣಗಳಿಗಾಗಿ ಸುಶೀಲ್​ ಕುಮಾರ್​ ಅವರನ್ನು ಪ್ರತ್ಯೇಕ ಗೇಟ್‌ನಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ಸಂಜೆಯೇ ಅವರ ಬಿಡುಗಡೆ ವಾರಂಟ್ ತಿಹಾರ್ ಜೈಲಿಗೆ ತಲುಪಿತ್ತು.ಬೆನ್ನು ನೋವಿನಿಂದ ಬಳಲುತ್ತಿರುವ ಸುಶೀಲ್​ ಕುಮಾರ್​ ಪತ್ನಿಗೆ ಶಸ್ತ್ರಚಿಕಿತ್ಸೆಯಿದ್ದು, ಪತ್ನಿಯನ್ನು ಭೇಟಿ ಮಾಡಲು ಅವಕಾಶ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಕಣ್ಗಾವಲು ಇಡುವಂತೆ ನ್ಯಾಯಾಲಯ ಸೂಚಿಸಿದೆ. ಸುಶೀಲ್ ಕುಮಾರ್ ಪತ್ನಿಗೆ ನವೆಂಬರ್ 7 ರಂದು ಶಸ್ತ್ರಚಿಕಿತ್ಸೆ ನಿಗದಿಪಡಿಸಲಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಸುಶೀಲ್ ಕುಮಾರ್ ಅವರಿಗೆ ನವೆಂಬರ್ 12 ರವರೆಗೆ ಮಧ್ಯಂತರ ಜಾಮೀನು ನೀಡಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅಂದರೆ ನವೆಂಬರ್ 13 ರಂದು ಸಂಬಂಧಪಟ್ಟ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿದೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago