ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 ಆರೋಪಿಗಳಲ್ಲಿ ಸುಶೀಲ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.
ಸಾಮಾನ್ಯವಾಗಿ ತಿಹಾರ್ ಜೈಲಿನ ನಂ.4 ಗೇಟ್ ಅನ್ನು ಕೈದಿಗಳ ಬಿಡುಗಡೆಗೆ ಬಳಸಲಾಗುತ್ತದೆ. ಆದರೆ ಭದ್ರತಾ ಕಾರಣಗಳಿಗಾಗಿ ಸುಶೀಲ್ ಕುಮಾರ್ ಅವರನ್ನು ಪ್ರತ್ಯೇಕ ಗೇಟ್ನಿಂದ ಬಿಡುಗಡೆ ಮಾಡಲಾಗಿದೆ. ಶನಿವಾರ ಸಂಜೆಯೇ ಅವರ ಬಿಡುಗಡೆ ವಾರಂಟ್ ತಿಹಾರ್ ಜೈಲಿಗೆ ತಲುಪಿತ್ತು.ಬೆನ್ನು ನೋವಿನಿಂದ ಬಳಲುತ್ತಿರುವ ಸುಶೀಲ್ ಕುಮಾರ್ ಪತ್ನಿಗೆ ಶಸ್ತ್ರಚಿಕಿತ್ಸೆಯಿದ್ದು, ಪತ್ನಿಯನ್ನು ಭೇಟಿ ಮಾಡಲು ಅವಕಾಶ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಕಣ್ಗಾವಲು ಇಡುವಂತೆ ನ್ಯಾಯಾಲಯ ಸೂಚಿಸಿದೆ. ಸುಶೀಲ್ ಕುಮಾರ್ ಪತ್ನಿಗೆ ನವೆಂಬರ್ 7 ರಂದು ಶಸ್ತ್ರಚಿಕಿತ್ಸೆ ನಿಗದಿಪಡಿಸಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು, ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಸುಶೀಲ್ ಕುಮಾರ್ ಅವರಿಗೆ ನವೆಂಬರ್ 12 ರವರೆಗೆ ಮಧ್ಯಂತರ ಜಾಮೀನು ನೀಡಿದ್ದಾರೆ. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಅಂದರೆ ನವೆಂಬರ್ 13 ರಂದು ಸಂಬಂಧಪಟ್ಟ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…