ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

2 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

2 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

2 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

2 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

2 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

3 hours ago