ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago