ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

32 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago