ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ಗೆ ಎಂಟ್ರಿ ಕೊಡಲು ಇಂಗ್ಲೆಂಡ್ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್ ಆಗಿದ್ದು, ಬ್ಯಾಟಿಂಗ್ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.
ಆಟಗಾರರ ಸಂಭಾವ್ಯ ಪಟ್ಟಿಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…