ಕ್ರೀಡೆ

ಟಿ-20 ವಿಶ್ವಕಪ್ : ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ

ಸಿಡ್ನಿ: ಟಿ20 ವಿಶ್ವಕಪ್​ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್​ಗೆ ಎಂಟ್ರಿ ಕೊಡಲು ಇಂಗ್ಲೆಂಡ್​ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್‌ ಆಗಿದ್ದು, ಬ್ಯಾಟಿಂಗ್​ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್​ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.
ಆಟಗಾರರ ಸಂಭಾವ್ಯ ಪಟ್ಟಿಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago