ಕ್ರೀಡೆ

ಟಿ20 ಏಷ್ಯಾಕಪ್‌ : ಪಾಕ್‌ ಸೋಲನ್ನು ಸಂಭ್ರಮಿಸಿದ ಆಫ್ಘಾನ್ಸ್‌

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್​ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್​ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.

andolana

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

2 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

3 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

3 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

3 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

3 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

3 hours ago