ಕ್ರೀಡೆ

ಟಿ20 ಏಷ್ಯಾಕಪ್‌ : ಪಾಕ್‌ ಸೋಲನ್ನು ಸಂಭ್ರಮಿಸಿದ ಆಫ್ಘಾನ್ಸ್‌

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್​ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್​ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago