ಕ್ರೀಡೆ

ಟಿ20 ಏಷ್ಯಾಕಪ್‌ : ಪಾಕ್‌ ಸೋಲನ್ನು ಸಂಭ್ರಮಿಸಿದ ಆಫ್ಘಾನ್ಸ್‌

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್​ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್​ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

13 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

13 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

13 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

14 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

14 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

23 hours ago