ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.
ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…