ಕ್ರೀಡೆ

ಟಿ20 ಏಷ್ಯಾಕಪ್‌ : ಪಾಕ್‌ ಸೋಲನ್ನು ಸಂಭ್ರಮಿಸಿದ ಆಫ್ಘಾನ್ಸ್‌

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.

ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್​ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್​ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.

andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

2 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

2 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

2 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

24 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

24 hours ago