ಇಂದೋರ್ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ 178ರನ್ಗೆ ಆಲ್ ಔಟ್ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ(0) ವಿಕೆಟ್ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.
ನಂತರ ಬಂದ ಶ್ರೇಯಸ್ ಅಯ್ಯರ್(1) ಕೂಡಾ ಬಂದ ಕೂಡಲೇ ಎಲ್ಬಿಡ್ಲ್ಯೂಗೆ ವಿಕೆಟ್ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್ ಪಂತ್(27) ಬೃಹತ್ ಮೊತ್ತ ಚೇಸಿಂಗ್ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್ ಕೂಡ ಕ್ವಿಕ್ ಇನ್ನಿಂಗ್ಸ್ ಕಟ್ಟಿದರು 21 ಬಾಲ್ಗೆ 4 ಬೌಂಡರಿ ಮತ್ತು ಸಿಕ್ಸ್ ಗಳಿಸಿ 46ರನ್ಗೆ ಔಟ್ ಆದರು.
ಸೂರ್ಯಕುಮಾರ್ ಯಾದವ್(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್ ಪಟೇಲ್(9), ಹರ್ಷಲ್ ಪಟೇಲ್(17), ಅಶ್ವನ್(2) ಸಹ ಕ್ರಿಸ್ನಲ್ಲಿ ನಿಲ್ಲಲೇ ಇಲ್ಲ. ದಿಪಕ್ ಚಹಾರ್(31) ಕೊನೆಯ ಗಳಿಗೆಯಲ್ಲಿ ರನ್ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್ 5 ರನ್ ಹೊಡೆದು ಔಟ್ ಆದರೆ ಉಮೇಶ್ ಯಾದವ್ (20) ಅಜೇಯರಾಗಿ ಉಳಿದರು.
ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್ ಪಡೆದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…