ಕ್ರೀಡೆ

T20 : ದಕ್ಷಿಣ ಆಫ್ರಿಕಾ ಮುಂದೆ ಭಾರತ 178ರನ್​ಗೆ ಆಲ್​ ಔಟ್

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್​ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್​ನಲ್ಲೇ ರೋಹಿತ್​ ಶರ್ಮಾ(0) ವಿಕೆಟ್​ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.

ನಂತರ ಬಂದ ಶ್ರೇಯಸ್​ ಅಯ್ಯರ್​(1) ಕೂಡಾ ಬಂದ ಕೂಡಲೇ ಎಲ್​ಬಿಡ್ಲ್ಯೂಗೆ ವಿಕೆಟ್​ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್​ ಪಂತ್​(27) ಬೃಹತ್​ ಮೊತ್ತ ಚೇಸಿಂಗ್​ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್​ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್​ ಕೂಡ ಕ್ವಿಕ್​ ಇನ್ನಿಂಗ್ಸ್​ ಕಟ್ಟಿದರು 21 ಬಾಲ್​ಗೆ 4 ಬೌಂಡರಿ ಮತ್ತು ಸಿಕ್ಸ್​ ಗಳಿಸಿ 46ರನ್​ಗೆ ಔಟ್​ ಆದರು.

ಸೂರ್ಯಕುಮಾರ್​ ಯಾದವ್​(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್​ ಪಟೇಲ್​(9), ಹರ್ಷಲ್​ ಪಟೇಲ್​(17), ಅಶ್ವನ್​(2) ಸಹ ಕ್ರಿಸ್​ನಲ್ಲಿ ನಿಲ್ಲಲೇ ಇಲ್ಲ. ದಿಪಕ್​ ಚಹಾರ್​(31) ಕೊನೆಯ ಗಳಿಗೆಯಲ್ಲಿ ರನ್​ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್​ 5 ರನ್​ ಹೊಡೆದು ಔಟ್​ ಆದರೆ ಉಮೇಶ್​ ಯಾದವ್​ (20) ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್​ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್‌ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್​ ಪಡೆದರು.

andolanait

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

30 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

44 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

56 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

1 hour ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

2 hours ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

3 hours ago