ಕ್ರೀಡೆ

T20 : ದಕ್ಷಿಣ ಆಫ್ರಿಕಾ ಮುಂದೆ ಭಾರತ 178ರನ್​ಗೆ ಆಲ್​ ಔಟ್

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್​ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್​ನಲ್ಲೇ ರೋಹಿತ್​ ಶರ್ಮಾ(0) ವಿಕೆಟ್​ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.

ನಂತರ ಬಂದ ಶ್ರೇಯಸ್​ ಅಯ್ಯರ್​(1) ಕೂಡಾ ಬಂದ ಕೂಡಲೇ ಎಲ್​ಬಿಡ್ಲ್ಯೂಗೆ ವಿಕೆಟ್​ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್​ ಪಂತ್​(27) ಬೃಹತ್​ ಮೊತ್ತ ಚೇಸಿಂಗ್​ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್​ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್​ ಕೂಡ ಕ್ವಿಕ್​ ಇನ್ನಿಂಗ್ಸ್​ ಕಟ್ಟಿದರು 21 ಬಾಲ್​ಗೆ 4 ಬೌಂಡರಿ ಮತ್ತು ಸಿಕ್ಸ್​ ಗಳಿಸಿ 46ರನ್​ಗೆ ಔಟ್​ ಆದರು.

ಸೂರ್ಯಕುಮಾರ್​ ಯಾದವ್​(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್​ ಪಟೇಲ್​(9), ಹರ್ಷಲ್​ ಪಟೇಲ್​(17), ಅಶ್ವನ್​(2) ಸಹ ಕ್ರಿಸ್​ನಲ್ಲಿ ನಿಲ್ಲಲೇ ಇಲ್ಲ. ದಿಪಕ್​ ಚಹಾರ್​(31) ಕೊನೆಯ ಗಳಿಗೆಯಲ್ಲಿ ರನ್​ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್​ 5 ರನ್​ ಹೊಡೆದು ಔಟ್​ ಆದರೆ ಉಮೇಶ್​ ಯಾದವ್​ (20) ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್​ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್‌ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್​ ಪಡೆದರು.

andolanait

Recent Posts

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

11 mins ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

1 hour ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

3 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

4 hours ago