ಕ್ರೀಡೆ

T20 : ದಕ್ಷಿಣ ಆಫ್ರಿಕಾ ಮುಂದೆ ಭಾರತ 178ರನ್​ಗೆ ಆಲ್​ ಔಟ್

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್​ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್​ನಲ್ಲೇ ರೋಹಿತ್​ ಶರ್ಮಾ(0) ವಿಕೆಟ್​ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.

ನಂತರ ಬಂದ ಶ್ರೇಯಸ್​ ಅಯ್ಯರ್​(1) ಕೂಡಾ ಬಂದ ಕೂಡಲೇ ಎಲ್​ಬಿಡ್ಲ್ಯೂಗೆ ವಿಕೆಟ್​ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್​ ಪಂತ್​(27) ಬೃಹತ್​ ಮೊತ್ತ ಚೇಸಿಂಗ್​ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್​ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್​ ಕೂಡ ಕ್ವಿಕ್​ ಇನ್ನಿಂಗ್ಸ್​ ಕಟ್ಟಿದರು 21 ಬಾಲ್​ಗೆ 4 ಬೌಂಡರಿ ಮತ್ತು ಸಿಕ್ಸ್​ ಗಳಿಸಿ 46ರನ್​ಗೆ ಔಟ್​ ಆದರು.

ಸೂರ್ಯಕುಮಾರ್​ ಯಾದವ್​(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್​ ಪಟೇಲ್​(9), ಹರ್ಷಲ್​ ಪಟೇಲ್​(17), ಅಶ್ವನ್​(2) ಸಹ ಕ್ರಿಸ್​ನಲ್ಲಿ ನಿಲ್ಲಲೇ ಇಲ್ಲ. ದಿಪಕ್​ ಚಹಾರ್​(31) ಕೊನೆಯ ಗಳಿಗೆಯಲ್ಲಿ ರನ್​ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್​ 5 ರನ್​ ಹೊಡೆದು ಔಟ್​ ಆದರೆ ಉಮೇಶ್​ ಯಾದವ್​ (20) ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್​ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್‌ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್​ ಪಡೆದರು.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

3 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

3 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

4 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 hours ago