ಇಂದೋರ್ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ 178ರನ್ಗೆ ಆಲ್ ಔಟ್ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ(0) ವಿಕೆಟ್ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.
ನಂತರ ಬಂದ ಶ್ರೇಯಸ್ ಅಯ್ಯರ್(1) ಕೂಡಾ ಬಂದ ಕೂಡಲೇ ಎಲ್ಬಿಡ್ಲ್ಯೂಗೆ ವಿಕೆಟ್ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್ ಪಂತ್(27) ಬೃಹತ್ ಮೊತ್ತ ಚೇಸಿಂಗ್ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್ ಕೂಡ ಕ್ವಿಕ್ ಇನ್ನಿಂಗ್ಸ್ ಕಟ್ಟಿದರು 21 ಬಾಲ್ಗೆ 4 ಬೌಂಡರಿ ಮತ್ತು ಸಿಕ್ಸ್ ಗಳಿಸಿ 46ರನ್ಗೆ ಔಟ್ ಆದರು.
ಸೂರ್ಯಕುಮಾರ್ ಯಾದವ್(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್ ಪಟೇಲ್(9), ಹರ್ಷಲ್ ಪಟೇಲ್(17), ಅಶ್ವನ್(2) ಸಹ ಕ್ರಿಸ್ನಲ್ಲಿ ನಿಲ್ಲಲೇ ಇಲ್ಲ. ದಿಪಕ್ ಚಹಾರ್(31) ಕೊನೆಯ ಗಳಿಗೆಯಲ್ಲಿ ರನ್ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್ 5 ರನ್ ಹೊಡೆದು ಔಟ್ ಆದರೆ ಉಮೇಶ್ ಯಾದವ್ (20) ಅಜೇಯರಾಗಿ ಉಳಿದರು.
ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್ ಪಡೆದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…