ಇಂದೋರ್ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ 178ರನ್ಗೆ ಆಲ್ ಔಟ್ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ(0) ವಿಕೆಟ್ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.
ನಂತರ ಬಂದ ಶ್ರೇಯಸ್ ಅಯ್ಯರ್(1) ಕೂಡಾ ಬಂದ ಕೂಡಲೇ ಎಲ್ಬಿಡ್ಲ್ಯೂಗೆ ವಿಕೆಟ್ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್ ಪಂತ್(27) ಬೃಹತ್ ಮೊತ್ತ ಚೇಸಿಂಗ್ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್ ಕೂಡ ಕ್ವಿಕ್ ಇನ್ನಿಂಗ್ಸ್ ಕಟ್ಟಿದರು 21 ಬಾಲ್ಗೆ 4 ಬೌಂಡರಿ ಮತ್ತು ಸಿಕ್ಸ್ ಗಳಿಸಿ 46ರನ್ಗೆ ಔಟ್ ಆದರು.
ಸೂರ್ಯಕುಮಾರ್ ಯಾದವ್(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್ ಪಟೇಲ್(9), ಹರ್ಷಲ್ ಪಟೇಲ್(17), ಅಶ್ವನ್(2) ಸಹ ಕ್ರಿಸ್ನಲ್ಲಿ ನಿಲ್ಲಲೇ ಇಲ್ಲ. ದಿಪಕ್ ಚಹಾರ್(31) ಕೊನೆಯ ಗಳಿಗೆಯಲ್ಲಿ ರನ್ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್ 5 ರನ್ ಹೊಡೆದು ಔಟ್ ಆದರೆ ಉಮೇಶ್ ಯಾದವ್ (20) ಅಜೇಯರಾಗಿ ಉಳಿದರು.
ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್ ಪಡೆದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…