ಕ್ರೀಡೆ

T20 : ದಕ್ಷಿಣ ಆಫ್ರಿಕಾ ಮುಂದೆ ಭಾರತ 178ರನ್​ಗೆ ಆಲ್​ ಔಟ್

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್​ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್​ನಲ್ಲೇ ರೋಹಿತ್​ ಶರ್ಮಾ(0) ವಿಕೆಟ್​ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.

ನಂತರ ಬಂದ ಶ್ರೇಯಸ್​ ಅಯ್ಯರ್​(1) ಕೂಡಾ ಬಂದ ಕೂಡಲೇ ಎಲ್​ಬಿಡ್ಲ್ಯೂಗೆ ವಿಕೆಟ್​ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್​ ಪಂತ್​(27) ಬೃಹತ್​ ಮೊತ್ತ ಚೇಸಿಂಗ್​ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್​ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್​ ಕೂಡ ಕ್ವಿಕ್​ ಇನ್ನಿಂಗ್ಸ್​ ಕಟ್ಟಿದರು 21 ಬಾಲ್​ಗೆ 4 ಬೌಂಡರಿ ಮತ್ತು ಸಿಕ್ಸ್​ ಗಳಿಸಿ 46ರನ್​ಗೆ ಔಟ್​ ಆದರು.

ಸೂರ್ಯಕುಮಾರ್​ ಯಾದವ್​(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್​ ಪಟೇಲ್​(9), ಹರ್ಷಲ್​ ಪಟೇಲ್​(17), ಅಶ್ವನ್​(2) ಸಹ ಕ್ರಿಸ್​ನಲ್ಲಿ ನಿಲ್ಲಲೇ ಇಲ್ಲ. ದಿಪಕ್​ ಚಹಾರ್​(31) ಕೊನೆಯ ಗಳಿಗೆಯಲ್ಲಿ ರನ್​ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್​ 5 ರನ್​ ಹೊಡೆದು ಔಟ್​ ಆದರೆ ಉಮೇಶ್​ ಯಾದವ್​ (20) ಅಜೇಯರಾಗಿ ಉಳಿದರು.

ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್​ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್‌ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್​ ಪಡೆದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago