ಇಂದೋರ್ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ 178ರನ್ಗೆ ಆಲ್ ಔಟ್ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಹರಿಣಗಳು ರಿಲೀ ರೊಸೊವ್ ಅವರ ಶತಕ ಹಾಗೂ ಕ್ವಿಂಟನ್ ಡಿ ಕಾಕ್ ಅರ್ಧ ಶತಕದ ನೆರವಿನಿಂದ ಭಾರತಕ್ಕೆ 228 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರಬಾಡ ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ(0) ವಿಕೆಟ್ ಪಡೆಯುವ ಮೂಲಕ ಆರಂಭಿಕ ಆಘಾತ ನೀಡಿದರು.
ನಂತರ ಬಂದ ಶ್ರೇಯಸ್ ಅಯ್ಯರ್(1) ಕೂಡಾ ಬಂದ ಕೂಡಲೇ ಎಲ್ಬಿಡ್ಲ್ಯೂಗೆ ವಿಕೆಟ್ ಒಪ್ಪಿಸಿದರು. ಆರಂಭಿಕರಾಗಿ ಬಂದಿದ್ದ ರಿಷಬ್ ಪಂತ್(27) ಬೃಹತ್ ಮೊತ್ತ ಚೇಸಿಂಗ್ ಮಾಡಲಿರುವ ಕಾರಣ ಬಿರುಸಿನ ಆಟಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು. ಅವರೊಂದಿಗೆ ದಿನೇಶ್ ಕಾರ್ತಿಕ್ ಕೂಡ ಕ್ವಿಕ್ ಇನ್ನಿಂಗ್ಸ್ ಕಟ್ಟಿದರು 21 ಬಾಲ್ಗೆ 4 ಬೌಂಡರಿ ಮತ್ತು ಸಿಕ್ಸ್ ಗಳಿಸಿ 46ರನ್ಗೆ ಔಟ್ ಆದರು.
ಸೂರ್ಯಕುಮಾರ್ ಯಾದವ್(8) ಇಂದು ವಿಫಲತೆ ಕಂಡರು. ಅವರೊಂದಿಗೆ ಅಕ್ಷರ್ ಪಟೇಲ್(9), ಹರ್ಷಲ್ ಪಟೇಲ್(17), ಅಶ್ವನ್(2) ಸಹ ಕ್ರಿಸ್ನಲ್ಲಿ ನಿಲ್ಲಲೇ ಇಲ್ಲ. ದಿಪಕ್ ಚಹಾರ್(31) ಕೊನೆಯ ಗಳಿಗೆಯಲ್ಲಿ ರನ್ ಕದಿಯುವ ಪ್ರಯತ್ನ ಮಾಡಿದರು. ಸಿರಾಜ್ 5 ರನ್ ಹೊಡೆದು ಔಟ್ ಆದರೆ ಉಮೇಶ್ ಯಾದವ್ (20) ಅಜೇಯರಾಗಿ ಉಳಿದರು.
ದಕ್ಷಿಣ ಆಫ್ರಕಾ ಪರ ಡ್ವೈನ್ ಪ್ರಿಟೋರಿಯಸ್ ಮೂರು ವಿಕೆಟ್ ಪಡೆದರು. ವೇಯ್ನ್ ಪಾರ್ನೆಲ್, ಲುಂಗಿ ಎನ್ಗಿಡಿ ಮತ್ತು ಕೇಶವ್ ಮಹಾರಾಜ್ ತಲಾ ಎರಡು ಹಾಗೇ ಕಗಿಸೊ ರಬಾಡ ಒಂದು ವಿಕೆಟ್ ಪಡೆದರು.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…