ಕ್ರೀಡೆ

ಟಿ20: ಭಾರತ-ನ್ಯೂಜಿಲೆಂಡ್‌ ಮೊದಲ ಪಂದ್ಯಕ್ಕೆ ಅಡ್ಡಿಯಾದ ಮಳೆ

ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದರಿಂದಾಗಿ, ಆಡಲು ಯೋಗ್ಯವಿಲ್ಲ ಎನ್ನುವುದನ್ನು ತೀರ್ಮಾನಿಸಿದ ಮ್ಯಾಚ್ ರೆಫ್ರಿ, ಪಂದ್ಯ ರದ್ದಾಗಿರುವುದಾಗಿ ಘೋಷಿಸಿದ್ದಾರೆ.

ಇದೀಗ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಇನ್ನೆರಡು ಟಿ20 ಪಂದ್ಯಗಳನ್ನು ಆಡಲಿದೆ. ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಆಸ್ಟ್ರೇಲಿಯಾದಲ್ಲಿ ಇತ್ತೀಚೆಗಷ್ಟೇ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮೀಸ್‌ನಲ್ಲೇ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಉಭಯ ತಂಡಗಳು ಇದೀಗ ಟಿ20 ಸರಣಿಯನ್ನಾಡುತ್ತಿವೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿಶ್ರಾಂತಿ ಬಯಸಿ ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದರು. ಹೀಗಾಗಿ ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕರಾಗಿ ನೇಮಕವಾಗಿದ್ದು, ವಿಕೆಟ್‌ ಕೀಪರ್ ಬ್ಯಾಟರ್ ರಿಷಭ್ ಪಂತ್ ಉಪನಾಯಕರಾಗಿ ನೇಮಕವಾಗಿದ್ದಾರೆ. ಇನ್ನು ರೋಹಿತ್ ಶರ್ಮಾ ಮಾತ್ರವಲ್ಲದೇ ತಾರಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಹಾಗೂ ರವಿಚಂದ್ರನ್ ಅಶ್ವಿನ್ ಕೂಡಾ ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದಾರೆ.

ಹಿರಿಯ ಆಟಗಾರರು ವಿಶ್ರಾಂತಿ ಪಡೆದಿದ್ದರಿಂದಾಗಿ ಯುವ ಪ್ರತಿಭೆಗಳಾದ ಶುಭ್‌ಮನ್ ಗಿಲ್, ಉಮ್ರಾನ್ ಮಲಿಕ್, ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್‌ ಅವರು ತಮ್ಮ ಪ್ರತಿಭೆ ಅನಾವರಣ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.  ಇನ್ನು ಹಿರಿಯ ಆಟಗಾರರು ಮಾತ್ರವಲ್ಲದೇ ಟೀಂ ಇಂಡಿಯಾ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ ಸಂಪೂರ್ಣ ಕೋಚಿಂಗ್ ಸಿಬ್ಬಂದಿಗೂ ಕೂಡಾ ವಿಶ್ರಾಂತಿ ನೀಡಲಾಗಿದೆ.

andolana

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

23 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

29 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

33 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

37 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

42 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

48 mins ago