ಕ್ರೀಡೆ

ಟಿ 20 – 2ನೇ ಪಂದ್ಯದಲ್ಲಿ ಟೀo ಇಂಡಿಯಾಗೆ ಗೆಲುವು

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ನಿಗದಿತ 8 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 90 ರನ್​ಗಳನ್ನು ಕಲೆ ಹಾಕಿತ್ತು. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ ಅತಿ ಹೆಚ್ಚು ರನ್ ಗಳಿಸಿದರು. 20 ಎಸೆತಗಳಲ್ಲಿ ಮೂರು ಸಿಕ್ಸ್​ ಹಾಗೂ ನಾಲ್ಕು ಬೌಂಡರಿಗಳೊಂದಿಗೆ ಅಜೇಯ 43 ರನ್​ ಗಳಿಸಿದರು. ಇವರಲ್ಲದೆ ನಾಯಕ ಆ್ಯರೋನ್ ಫಿಂಚ್ 15 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸ್​ನೊಂದಿಗೆ 31 ರನ್​ ಬಾರಿಸಿದರು. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ಅಕ್ಷರ್ ಪಟೇಲ್ ಎರಡು ಮತ್ತು ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಮತ್ತು ಹರ್ಷಲ್ ಪಟೇಲ್ ಅವರು ಮರೂನ್ ಗ್ರೀನ್ (5) ಹಾಗೂ ಸ್ಟೀವನ್ ಸ್ಮಿತ್ (8) ರನ್ ಔಟ್​ ಬಲೆಗೆ ಕೆಡವಿದರು.

ಆಸ್ಟ್ರೇಲಿಯಾ ತಂಡ ನೀಡಿದ ಮೊತ್ತವನ್ನು ಬೆನ್ನತ್ತಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಕೆಎಲ್​ ರಾಹುಲ್​ ಮೊದಲ ವಿಕೆಟ್​ಗೆ 39 ರನ್​ಗಳನ್ನು ಕಲೆ ಹಾಕಿದರು. ಬಳಿಕ ವಿರಾಟ್​ ಕೊಹ್ಲಿ ಕಣಕ್ಕಿಳಿದರು. ಇವರು ಸಹ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೇ ಪೆವಿಲಿಯನ್ ಹಾದಿ ಹಿಡಿದರು. ಸೂರ್ಯ ಕುಮಾರ್​ ಯಾದವ್​ ಸಹ ರನ್​ ಕಲೆ ಹಾಕದೇ ಗೋಲ್ಡನ್​ ಡೆಕ್​ಔಟ್​ ಆದರು. ಹಾರ್ದಿಕ್ ಪಾಂಡ್ಯ ಸಹ ಮಿಂಚಲಿಲ್ಲ. ನಾಯಕ ರೋಹಿತ್​ ಶರ್ಮಾ ಜೊತೆಗೂಡಿದ ದಿನೇಶ್​ ಕಾರ್ತಿಕ್ ಗೆಲುವಿನ ಹಾದಿ ತಲುಪಿಸುವಲ್ಲಿ ಯಶಸ್ವಿಯಾದರು.
ಭಾರತ ತಂಡದ ಪರ ರೋಹಿತ್ ಶರ್ಮಾ 46 ರನ್, ಕೆಎಲ್ ರಾಹುಲ್ 10, ಕೊಹ್ಲಿ 11, ಪಾಂಡ್ಯಾ 9 ಮತ್ತು ದಿನೇಶ್ ಕಾರ್ತಿಕ್ 10 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಆ್ಯಡಂ ಝಾಂಪಾ 3 ವಿಕೆಟ್, ಪ್ಯಾಟ್ ಕಮಿನ್ಸ್ 1 ವಿಕೆಟ್ ಕಬಳಿಸಿದರು.
ನಾಗ್ಪುರದಲ್ಲಿ ಮಳೆಯಾಗುತ್ತಿರುವ ಕಾರಣ ಮೈದಾನ ಒದ್ದೆಯಾಗಿ ಈ ಪಂದ್ಯ ಎಂಟು ಓವರ್‌ಗಳಿಗೆ ನಿಗದಿ ಮಾಡಲಾಗಿದೆ. ಎರಡು ಓವರ್‌ಗಳ ಪವರ್‌ಪ್ಲೇ ಇರುತ್ತದೆ. ಒಬ್ಬ ಬೌಲರ್​ಗೆ ಗರಿಷ್ಠ ಎರಡು ಓವರ್‌ಗಳನ್ನು ಬೌಲ್ ಮಾಡಲು ಅವಕಾಶ ನೀಡಲಾಗಿತ್ತು.
andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

1 hour ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago