ಕ್ರೀಡೆ

ಟಿ 20 – 2ನೇ ಪಂದ್ಯದಲ್ಲಿ ಟೀo ಇಂಡಿಯಾಗೆ ಗೆಲುವು

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ನಿಗದಿತ 8 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 90 ರನ್​ಗಳನ್ನು ಕಲೆ ಹಾಕಿತ್ತು. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ ಅತಿ ಹೆಚ್ಚು ರನ್ ಗಳಿಸಿದರು. 20 ಎಸೆತಗಳಲ್ಲಿ ಮೂರು ಸಿಕ್ಸ್​ ಹಾಗೂ ನಾಲ್ಕು ಬೌಂಡರಿಗಳೊಂದಿಗೆ ಅಜೇಯ 43 ರನ್​ ಗಳಿಸಿದರು. ಇವರಲ್ಲದೆ ನಾಯಕ ಆ್ಯರೋನ್ ಫಿಂಚ್ 15 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸ್​ನೊಂದಿಗೆ 31 ರನ್​ ಬಾರಿಸಿದರು. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ಅಕ್ಷರ್ ಪಟೇಲ್ ಎರಡು ಮತ್ತು ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಮತ್ತು ಹರ್ಷಲ್ ಪಟೇಲ್ ಅವರು ಮರೂನ್ ಗ್ರೀನ್ (5) ಹಾಗೂ ಸ್ಟೀವನ್ ಸ್ಮಿತ್ (8) ರನ್ ಔಟ್​ ಬಲೆಗೆ ಕೆಡವಿದರು.

ಆಸ್ಟ್ರೇಲಿಯಾ ತಂಡ ನೀಡಿದ ಮೊತ್ತವನ್ನು ಬೆನ್ನತ್ತಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಕೆಎಲ್​ ರಾಹುಲ್​ ಮೊದಲ ವಿಕೆಟ್​ಗೆ 39 ರನ್​ಗಳನ್ನು ಕಲೆ ಹಾಕಿದರು. ಬಳಿಕ ವಿರಾಟ್​ ಕೊಹ್ಲಿ ಕಣಕ್ಕಿಳಿದರು. ಇವರು ಸಹ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೇ ಪೆವಿಲಿಯನ್ ಹಾದಿ ಹಿಡಿದರು. ಸೂರ್ಯ ಕುಮಾರ್​ ಯಾದವ್​ ಸಹ ರನ್​ ಕಲೆ ಹಾಕದೇ ಗೋಲ್ಡನ್​ ಡೆಕ್​ಔಟ್​ ಆದರು. ಹಾರ್ದಿಕ್ ಪಾಂಡ್ಯ ಸಹ ಮಿಂಚಲಿಲ್ಲ. ನಾಯಕ ರೋಹಿತ್​ ಶರ್ಮಾ ಜೊತೆಗೂಡಿದ ದಿನೇಶ್​ ಕಾರ್ತಿಕ್ ಗೆಲುವಿನ ಹಾದಿ ತಲುಪಿಸುವಲ್ಲಿ ಯಶಸ್ವಿಯಾದರು.
ಭಾರತ ತಂಡದ ಪರ ರೋಹಿತ್ ಶರ್ಮಾ 46 ರನ್, ಕೆಎಲ್ ರಾಹುಲ್ 10, ಕೊಹ್ಲಿ 11, ಪಾಂಡ್ಯಾ 9 ಮತ್ತು ದಿನೇಶ್ ಕಾರ್ತಿಕ್ 10 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಆ್ಯಡಂ ಝಾಂಪಾ 3 ವಿಕೆಟ್, ಪ್ಯಾಟ್ ಕಮಿನ್ಸ್ 1 ವಿಕೆಟ್ ಕಬಳಿಸಿದರು.
ನಾಗ್ಪುರದಲ್ಲಿ ಮಳೆಯಾಗುತ್ತಿರುವ ಕಾರಣ ಮೈದಾನ ಒದ್ದೆಯಾಗಿ ಈ ಪಂದ್ಯ ಎಂಟು ಓವರ್‌ಗಳಿಗೆ ನಿಗದಿ ಮಾಡಲಾಗಿದೆ. ಎರಡು ಓವರ್‌ಗಳ ಪವರ್‌ಪ್ಲೇ ಇರುತ್ತದೆ. ಒಬ್ಬ ಬೌಲರ್​ಗೆ ಗರಿಷ್ಠ ಎರಡು ಓವರ್‌ಗಳನ್ನು ಬೌಲ್ ಮಾಡಲು ಅವಕಾಶ ನೀಡಲಾಗಿತ್ತು.
andolanait

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

38 mins ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

40 mins ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

43 mins ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

45 mins ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

48 mins ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

52 mins ago