ಕ್ರೀಡೆ

ಟಿ 20 – 2ನೇ ಪಂದ್ಯದಲ್ಲಿ ಟೀo ಇಂಡಿಯಾಗೆ ಗೆಲುವು

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ನಿಗದಿತ 8 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 90 ರನ್​ಗಳನ್ನು ಕಲೆ ಹಾಕಿತ್ತು. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ ಅತಿ ಹೆಚ್ಚು ರನ್ ಗಳಿಸಿದರು. 20 ಎಸೆತಗಳಲ್ಲಿ ಮೂರು ಸಿಕ್ಸ್​ ಹಾಗೂ ನಾಲ್ಕು ಬೌಂಡರಿಗಳೊಂದಿಗೆ ಅಜೇಯ 43 ರನ್​ ಗಳಿಸಿದರು. ಇವರಲ್ಲದೆ ನಾಯಕ ಆ್ಯರೋನ್ ಫಿಂಚ್ 15 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸ್​ನೊಂದಿಗೆ 31 ರನ್​ ಬಾರಿಸಿದರು. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ಅಕ್ಷರ್ ಪಟೇಲ್ ಎರಡು ಮತ್ತು ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಮತ್ತು ಹರ್ಷಲ್ ಪಟೇಲ್ ಅವರು ಮರೂನ್ ಗ್ರೀನ್ (5) ಹಾಗೂ ಸ್ಟೀವನ್ ಸ್ಮಿತ್ (8) ರನ್ ಔಟ್​ ಬಲೆಗೆ ಕೆಡವಿದರು.

ಆಸ್ಟ್ರೇಲಿಯಾ ತಂಡ ನೀಡಿದ ಮೊತ್ತವನ್ನು ಬೆನ್ನತ್ತಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಕೆಎಲ್​ ರಾಹುಲ್​ ಮೊದಲ ವಿಕೆಟ್​ಗೆ 39 ರನ್​ಗಳನ್ನು ಕಲೆ ಹಾಕಿದರು. ಬಳಿಕ ವಿರಾಟ್​ ಕೊಹ್ಲಿ ಕಣಕ್ಕಿಳಿದರು. ಇವರು ಸಹ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೇ ಪೆವಿಲಿಯನ್ ಹಾದಿ ಹಿಡಿದರು. ಸೂರ್ಯ ಕುಮಾರ್​ ಯಾದವ್​ ಸಹ ರನ್​ ಕಲೆ ಹಾಕದೇ ಗೋಲ್ಡನ್​ ಡೆಕ್​ಔಟ್​ ಆದರು. ಹಾರ್ದಿಕ್ ಪಾಂಡ್ಯ ಸಹ ಮಿಂಚಲಿಲ್ಲ. ನಾಯಕ ರೋಹಿತ್​ ಶರ್ಮಾ ಜೊತೆಗೂಡಿದ ದಿನೇಶ್​ ಕಾರ್ತಿಕ್ ಗೆಲುವಿನ ಹಾದಿ ತಲುಪಿಸುವಲ್ಲಿ ಯಶಸ್ವಿಯಾದರು.
ಭಾರತ ತಂಡದ ಪರ ರೋಹಿತ್ ಶರ್ಮಾ 46 ರನ್, ಕೆಎಲ್ ರಾಹುಲ್ 10, ಕೊಹ್ಲಿ 11, ಪಾಂಡ್ಯಾ 9 ಮತ್ತು ದಿನೇಶ್ ಕಾರ್ತಿಕ್ 10 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಆ್ಯಡಂ ಝಾಂಪಾ 3 ವಿಕೆಟ್, ಪ್ಯಾಟ್ ಕಮಿನ್ಸ್ 1 ವಿಕೆಟ್ ಕಬಳಿಸಿದರು.
ನಾಗ್ಪುರದಲ್ಲಿ ಮಳೆಯಾಗುತ್ತಿರುವ ಕಾರಣ ಮೈದಾನ ಒದ್ದೆಯಾಗಿ ಈ ಪಂದ್ಯ ಎಂಟು ಓವರ್‌ಗಳಿಗೆ ನಿಗದಿ ಮಾಡಲಾಗಿದೆ. ಎರಡು ಓವರ್‌ಗಳ ಪವರ್‌ಪ್ಲೇ ಇರುತ್ತದೆ. ಒಬ್ಬ ಬೌಲರ್​ಗೆ ಗರಿಷ್ಠ ಎರಡು ಓವರ್‌ಗಳನ್ನು ಬೌಲ್ ಮಾಡಲು ಅವಕಾಶ ನೀಡಲಾಗಿತ್ತು.
andolanait

Recent Posts

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

49 mins ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

1 hour ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

1 hour ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 hours ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

2 hours ago