ಕ್ರೀಡೆ

ಟಿ 20 – 2ನೇ ಪಂದ್ಯದಲ್ಲಿ ಟೀo ಇಂಡಿಯಾಗೆ ಗೆಲುವು

ನಾಗ್ಪುರ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆ್‌ದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ್ದ 91 ರನ್​ಗಳ ಗುರಿಯನ್ನು 7.2 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಭಾರತ ತಲುಪಿತು.

ಮೊದಲು ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ನಿಗದಿತ 8 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 90 ರನ್​ಗಳನ್ನು ಕಲೆ ಹಾಕಿತ್ತು. ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ ಅತಿ ಹೆಚ್ಚು ರನ್ ಗಳಿಸಿದರು. 20 ಎಸೆತಗಳಲ್ಲಿ ಮೂರು ಸಿಕ್ಸ್​ ಹಾಗೂ ನಾಲ್ಕು ಬೌಂಡರಿಗಳೊಂದಿಗೆ ಅಜೇಯ 43 ರನ್​ ಗಳಿಸಿದರು. ಇವರಲ್ಲದೆ ನಾಯಕ ಆ್ಯರೋನ್ ಫಿಂಚ್ 15 ಎಸೆತಗಳಲ್ಲಿ ನಾಲ್ಕು ಬೌಂಡರಿ, ಒಂದು ಸಿಕ್ಸ್​ನೊಂದಿಗೆ 31 ರನ್​ ಬಾರಿಸಿದರು. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ಅಕ್ಷರ್ ಪಟೇಲ್ ಎರಡು ಮತ್ತು ಜಸ್ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಮತ್ತು ಹರ್ಷಲ್ ಪಟೇಲ್ ಅವರು ಮರೂನ್ ಗ್ರೀನ್ (5) ಹಾಗೂ ಸ್ಟೀವನ್ ಸ್ಮಿತ್ (8) ರನ್ ಔಟ್​ ಬಲೆಗೆ ಕೆಡವಿದರು.

ಆಸ್ಟ್ರೇಲಿಯಾ ತಂಡ ನೀಡಿದ ಮೊತ್ತವನ್ನು ಬೆನ್ನತ್ತಿದ್ದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ನಾಯಕ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಕೆಎಲ್​ ರಾಹುಲ್​ ಮೊದಲ ವಿಕೆಟ್​ಗೆ 39 ರನ್​ಗಳನ್ನು ಕಲೆ ಹಾಕಿದರು. ಬಳಿಕ ವಿರಾಟ್​ ಕೊಹ್ಲಿ ಕಣಕ್ಕಿಳಿದರು. ಇವರು ಸಹ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೇ ಪೆವಿಲಿಯನ್ ಹಾದಿ ಹಿಡಿದರು. ಸೂರ್ಯ ಕುಮಾರ್​ ಯಾದವ್​ ಸಹ ರನ್​ ಕಲೆ ಹಾಕದೇ ಗೋಲ್ಡನ್​ ಡೆಕ್​ಔಟ್​ ಆದರು. ಹಾರ್ದಿಕ್ ಪಾಂಡ್ಯ ಸಹ ಮಿಂಚಲಿಲ್ಲ. ನಾಯಕ ರೋಹಿತ್​ ಶರ್ಮಾ ಜೊತೆಗೂಡಿದ ದಿನೇಶ್​ ಕಾರ್ತಿಕ್ ಗೆಲುವಿನ ಹಾದಿ ತಲುಪಿಸುವಲ್ಲಿ ಯಶಸ್ವಿಯಾದರು.
ಭಾರತ ತಂಡದ ಪರ ರೋಹಿತ್ ಶರ್ಮಾ 46 ರನ್, ಕೆಎಲ್ ರಾಹುಲ್ 10, ಕೊಹ್ಲಿ 11, ಪಾಂಡ್ಯಾ 9 ಮತ್ತು ದಿನೇಶ್ ಕಾರ್ತಿಕ್ 10 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಆ್ಯಡಂ ಝಾಂಪಾ 3 ವಿಕೆಟ್, ಪ್ಯಾಟ್ ಕಮಿನ್ಸ್ 1 ವಿಕೆಟ್ ಕಬಳಿಸಿದರು.
ನಾಗ್ಪುರದಲ್ಲಿ ಮಳೆಯಾಗುತ್ತಿರುವ ಕಾರಣ ಮೈದಾನ ಒದ್ದೆಯಾಗಿ ಈ ಪಂದ್ಯ ಎಂಟು ಓವರ್‌ಗಳಿಗೆ ನಿಗದಿ ಮಾಡಲಾಗಿದೆ. ಎರಡು ಓವರ್‌ಗಳ ಪವರ್‌ಪ್ಲೇ ಇರುತ್ತದೆ. ಒಬ್ಬ ಬೌಲರ್​ಗೆ ಗರಿಷ್ಠ ಎರಡು ಓವರ್‌ಗಳನ್ನು ಬೌಲ್ ಮಾಡಲು ಅವಕಾಶ ನೀಡಲಾಗಿತ್ತು.
andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

8 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

9 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

9 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

9 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

9 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

10 hours ago