ಕ್ರೀಡೆ

ಟಿ20 ವಿಶ್ವಕಪ್‌: ನ್ಯೂಜಿಲೆಂಡ್‌ ಎದುರು ಸೋತ ಶ್ರೀಲಂಕಾ

ಟಿ20 ವಿಶ್ವಕಪ್ 2022 ರಲ್ಲಿ ನ್ಯೂಜಿಲೆಂಡ್ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ್ದ ನ್ಯೂಜಿಲೆಂಡ್ ತಂಡ ಇದೀಗ ಶ್ರೀಲಂಕಾವನ್ನು 70 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ ಗ್ಲೆನ್ ಫಿಲಿಪ್ಸ್ ಅವರ ಅಬ್ಬರದ ಶತಕ ಆದಾರದ ಮೇಲೆ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟ್ರೆಂಟ್ ಬೌಲ್ಟ್ ಮಾರಕ ಬೌಲಿಂಗ್ ಮುಂದೆ ಮಕಾಡೆ ಮಲಗುವುದರೊಂದಿಗೆ ಕೇವಲ 102 ರನ್​ಗಳಿಗೆ ಅಲೌಟ್​ ಆಯಿತು.

ಸಿಡ್ನಿಯಲ್ಲಿ ನಡೆದ ಈ ಪಂದ್ಯವು ಸೂಪರ್ -12 ಸುತ್ತಿನಲ್ಲಿ ಒಂದನೇ ಗುಂಪಿಗೆ ಬಹಳ ಮಹತ್ವದ್ದಾಗಿತ್ತು. ಈ ಗುಂಪಿನ ಕೊನೆಯ ಕೆಲವು ಪಂದ್ಯಗಳು ಮಳೆಯಿಂದಾಗಿ ರದ್ದಾಗಿದ್ದವು. ಹೀಗಾಗಿ ಈ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ತಂಡದ ಆರಂಭಿಕ 3 ವಿಕೆಟ್​ಗಳು ಕೇವಲ 15 ರನ್​ಗಳಿಗೆ ಉರುಳಿದವು. ಆದರೆ ಆ ಬಳಿಕ ತಂಡದ ಇನ್ನಿಂಗ್ಸ್ ಕಟ್ಟಿದ ಗ್ಲೆನ್ ಫಿಲಿಪ್ಸ್ ಅಬ್ಬರದ ಶತಕ ಸಿಡಿಸುವುದರೊಂದಿಗೆ ತಂಡವನ್ನು ಈ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

14 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago