ಕ್ರೀಡೆ

ಟಿ20 ವಿಶ್ವಕಪ್‌ : ಭಾರತಕ್ಕೆ 160 ರನ್ ಗುರಿ ನೀಡಿದ ಪಾಕಿಸ್ತಾನ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ ಕಲೆಹಾಕಿದೆ.

ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟಿ20 ಮಾದರಿಯಲ್ಲಿ ವಿಶ್ವದ ಶ್ರೇಷ್ಠ ಆರಂಭಿಕ ಜೋಡಿಗಳಲ್ಲಿ ಒಂದೆನಿಸಿರುವ ಮೊಹಮ್ಮದ್‌ ರಿಜ್ವಾನ್‌ (4) ಹಾಗೂ ಬಾಬರ್‌ ಅಜಂ (0) ಪಾಕಿಸ್ತಾನಕ್ಕೆ ಕೈಕೊಟ್ಟರು.
ಯುವ ವೇಗಿ ಅರ್ಶದೀಪ್ ಸಿಂಗ್‌, ತಂಡದ ಮೊತ್ತ 15 ರನ್‌ ಆಗುವಷ್ಟರಲ್ಲಿಯೇ ಇವರಿಬ್ಬರಿಗೂ ಪೆವಿಲಿಯನ್‌ ದಾರಿ ತೋರಿದರು.ಆಸರೆಯಾದ ಮಸೂದ್, ಇಫ್ತಿಕರ್‌ ಈ ಹಂತದಲ್ಲಿ ಜೊತೆಯಾದ ಶಾನ್‌ ಮಸೂದ್‌ ಮತ್ತು ಇಫ್ತಿಕರ್‌ ಅಹಮದ್ ವಿಕೆಟ್ ಉರುಳುವಿಕೆಗೆ ತಡೆಯೊಡ್ಡಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಇವರಿಬ್ಬರು, ನಿಧಾನವಾಗಿ ರನ್‌ ಗತಿ ಹೆಚ್ಚಿಸಿದರು. ಈ ಜೋಡಿ ಮೂರನೇ ವಿಕೆಟ್‌ ಪಾಲುದಾರಿಕೆಯಲ್ಲಿ 76ರನ್ ಕಲೆಹಾಕಿತು.ಇಫ್ತಿಕರ್‌ 34 ಎಸೆತಗಳಲ್ಲಿ 4 ಸಿಕ್ಸರ್‌ 2 ಬೌಂಡರಿ ಸಹಿತ 51 ರನ್‌ ಗಳಿಸಿ ಔಟಾದರು. ಆದರೆ, ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ಕ್ರೀಸ್‌ಗೆ ಅಂಟಿಕೊಂಡು ಕೊನೆಯವರೆಗೂ ಆಡಿದ ಮಸೂದ್‌, ಕೆಳ ಕ್ರಮಾಂಕದ ಬ್ಯಾಟರ್‌ಗಳೊಂದಿಗೆ ರನ್‌ ಗತಿ ಹೆಚ್ಚಿಸುವ ಪ್ರಯತ್ನ ಮಾಡಿದರು.
42 ಎಸೆತಗಳನ್ನು ಎದುರಿಸಿದ ಮಸೂದ್‌, 52 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿಗಳಿದ್ದವು.ಕೊನೆಯಲ್ಲಿ ಶಾಹಿನ್‌ ಅಫ್ರಿದಿ (16), ಮಸೂದ್‌ಗೆ ಉತ್ತಮ ಬೆಂಬಲ ನೀಡಿದರು. ಹೀಗಾಗಿ 159 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.ಭಾರತ ಪರ ಉತ್ತಮವಾಗಿ ಬೌಲಿಂಗ್‌ ಮಾಡಿದ ಅರ್ಶದೀಪ್‌ ಸಿಂಗ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಮೂರು ವಿಕೆಟ್‌ ಕಬಳಿಸಿದರು. ಇವರಿಬ್ಬರೂ ತಮ್ಮ ಪಾಲಿನ 4 ಓವರ್‌ಗಳಲ್ಲಿ ಕ್ರಮವಾಗಿ 32 ಮತ್ತು 30 ರನ್‌ ಬಿಟ್ಟುಕೊಟ್ಟರು. ಮತ್ತೆರಡು ವಿಕೆಟ್‌ಗಳನ್ನು ಮೊಹಮ್ಮದ್‌ ಶಮಿ ಮತ್ತು ಭುವನೇಶ್ವರ್‌ ಕುಮಾರ್ ಹಂಚಿಕೊಂಡರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago