ಕ್ರೀಡೆ

ಟಿ20 ವಿಶ್ವಕಪ್‌ : ಭಾರತಕ್ಕೆ 160 ರನ್ ಗುರಿ ನೀಡಿದ ಪಾಕಿಸ್ತಾನ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ ಕಲೆಹಾಕಿದೆ.

ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟಿ20 ಮಾದರಿಯಲ್ಲಿ ವಿಶ್ವದ ಶ್ರೇಷ್ಠ ಆರಂಭಿಕ ಜೋಡಿಗಳಲ್ಲಿ ಒಂದೆನಿಸಿರುವ ಮೊಹಮ್ಮದ್‌ ರಿಜ್ವಾನ್‌ (4) ಹಾಗೂ ಬಾಬರ್‌ ಅಜಂ (0) ಪಾಕಿಸ್ತಾನಕ್ಕೆ ಕೈಕೊಟ್ಟರು.
ಯುವ ವೇಗಿ ಅರ್ಶದೀಪ್ ಸಿಂಗ್‌, ತಂಡದ ಮೊತ್ತ 15 ರನ್‌ ಆಗುವಷ್ಟರಲ್ಲಿಯೇ ಇವರಿಬ್ಬರಿಗೂ ಪೆವಿಲಿಯನ್‌ ದಾರಿ ತೋರಿದರು.ಆಸರೆಯಾದ ಮಸೂದ್, ಇಫ್ತಿಕರ್‌ ಈ ಹಂತದಲ್ಲಿ ಜೊತೆಯಾದ ಶಾನ್‌ ಮಸೂದ್‌ ಮತ್ತು ಇಫ್ತಿಕರ್‌ ಅಹಮದ್ ವಿಕೆಟ್ ಉರುಳುವಿಕೆಗೆ ತಡೆಯೊಡ್ಡಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಇವರಿಬ್ಬರು, ನಿಧಾನವಾಗಿ ರನ್‌ ಗತಿ ಹೆಚ್ಚಿಸಿದರು. ಈ ಜೋಡಿ ಮೂರನೇ ವಿಕೆಟ್‌ ಪಾಲುದಾರಿಕೆಯಲ್ಲಿ 76ರನ್ ಕಲೆಹಾಕಿತು.ಇಫ್ತಿಕರ್‌ 34 ಎಸೆತಗಳಲ್ಲಿ 4 ಸಿಕ್ಸರ್‌ 2 ಬೌಂಡರಿ ಸಹಿತ 51 ರನ್‌ ಗಳಿಸಿ ಔಟಾದರು. ಆದರೆ, ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ಕ್ರೀಸ್‌ಗೆ ಅಂಟಿಕೊಂಡು ಕೊನೆಯವರೆಗೂ ಆಡಿದ ಮಸೂದ್‌, ಕೆಳ ಕ್ರಮಾಂಕದ ಬ್ಯಾಟರ್‌ಗಳೊಂದಿಗೆ ರನ್‌ ಗತಿ ಹೆಚ್ಚಿಸುವ ಪ್ರಯತ್ನ ಮಾಡಿದರು.
42 ಎಸೆತಗಳನ್ನು ಎದುರಿಸಿದ ಮಸೂದ್‌, 52 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿಗಳಿದ್ದವು.ಕೊನೆಯಲ್ಲಿ ಶಾಹಿನ್‌ ಅಫ್ರಿದಿ (16), ಮಸೂದ್‌ಗೆ ಉತ್ತಮ ಬೆಂಬಲ ನೀಡಿದರು. ಹೀಗಾಗಿ 159 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.ಭಾರತ ಪರ ಉತ್ತಮವಾಗಿ ಬೌಲಿಂಗ್‌ ಮಾಡಿದ ಅರ್ಶದೀಪ್‌ ಸಿಂಗ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಮೂರು ವಿಕೆಟ್‌ ಕಬಳಿಸಿದರು. ಇವರಿಬ್ಬರೂ ತಮ್ಮ ಪಾಲಿನ 4 ಓವರ್‌ಗಳಲ್ಲಿ ಕ್ರಮವಾಗಿ 32 ಮತ್ತು 30 ರನ್‌ ಬಿಟ್ಟುಕೊಟ್ಟರು. ಮತ್ತೆರಡು ವಿಕೆಟ್‌ಗಳನ್ನು ಮೊಹಮ್ಮದ್‌ ಶಮಿ ಮತ್ತು ಭುವನೇಶ್ವರ್‌ ಕುಮಾರ್ ಹಂಚಿಕೊಂಡರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

42 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

50 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

56 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

16 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago