ಕ್ರೀಡೆ

ಟಿ20 ವಿಶ್ವಕಪ್‌ : ಭಾರತಕ್ಕೆ 160 ರನ್ ಗುರಿ ನೀಡಿದ ಪಾಕಿಸ್ತಾನ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ ಕಲೆಹಾಕಿದೆ.

ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟಿ20 ಮಾದರಿಯಲ್ಲಿ ವಿಶ್ವದ ಶ್ರೇಷ್ಠ ಆರಂಭಿಕ ಜೋಡಿಗಳಲ್ಲಿ ಒಂದೆನಿಸಿರುವ ಮೊಹಮ್ಮದ್‌ ರಿಜ್ವಾನ್‌ (4) ಹಾಗೂ ಬಾಬರ್‌ ಅಜಂ (0) ಪಾಕಿಸ್ತಾನಕ್ಕೆ ಕೈಕೊಟ್ಟರು.
ಯುವ ವೇಗಿ ಅರ್ಶದೀಪ್ ಸಿಂಗ್‌, ತಂಡದ ಮೊತ್ತ 15 ರನ್‌ ಆಗುವಷ್ಟರಲ್ಲಿಯೇ ಇವರಿಬ್ಬರಿಗೂ ಪೆವಿಲಿಯನ್‌ ದಾರಿ ತೋರಿದರು.ಆಸರೆಯಾದ ಮಸೂದ್, ಇಫ್ತಿಕರ್‌ ಈ ಹಂತದಲ್ಲಿ ಜೊತೆಯಾದ ಶಾನ್‌ ಮಸೂದ್‌ ಮತ್ತು ಇಫ್ತಿಕರ್‌ ಅಹಮದ್ ವಿಕೆಟ್ ಉರುಳುವಿಕೆಗೆ ತಡೆಯೊಡ್ಡಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಇವರಿಬ್ಬರು, ನಿಧಾನವಾಗಿ ರನ್‌ ಗತಿ ಹೆಚ್ಚಿಸಿದರು. ಈ ಜೋಡಿ ಮೂರನೇ ವಿಕೆಟ್‌ ಪಾಲುದಾರಿಕೆಯಲ್ಲಿ 76ರನ್ ಕಲೆಹಾಕಿತು.ಇಫ್ತಿಕರ್‌ 34 ಎಸೆತಗಳಲ್ಲಿ 4 ಸಿಕ್ಸರ್‌ 2 ಬೌಂಡರಿ ಸಹಿತ 51 ರನ್‌ ಗಳಿಸಿ ಔಟಾದರು. ಆದರೆ, ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ಕ್ರೀಸ್‌ಗೆ ಅಂಟಿಕೊಂಡು ಕೊನೆಯವರೆಗೂ ಆಡಿದ ಮಸೂದ್‌, ಕೆಳ ಕ್ರಮಾಂಕದ ಬ್ಯಾಟರ್‌ಗಳೊಂದಿಗೆ ರನ್‌ ಗತಿ ಹೆಚ್ಚಿಸುವ ಪ್ರಯತ್ನ ಮಾಡಿದರು.
42 ಎಸೆತಗಳನ್ನು ಎದುರಿಸಿದ ಮಸೂದ್‌, 52 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿಗಳಿದ್ದವು.ಕೊನೆಯಲ್ಲಿ ಶಾಹಿನ್‌ ಅಫ್ರಿದಿ (16), ಮಸೂದ್‌ಗೆ ಉತ್ತಮ ಬೆಂಬಲ ನೀಡಿದರು. ಹೀಗಾಗಿ 159 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.ಭಾರತ ಪರ ಉತ್ತಮವಾಗಿ ಬೌಲಿಂಗ್‌ ಮಾಡಿದ ಅರ್ಶದೀಪ್‌ ಸಿಂಗ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಮೂರು ವಿಕೆಟ್‌ ಕಬಳಿಸಿದರು. ಇವರಿಬ್ಬರೂ ತಮ್ಮ ಪಾಲಿನ 4 ಓವರ್‌ಗಳಲ್ಲಿ ಕ್ರಮವಾಗಿ 32 ಮತ್ತು 30 ರನ್‌ ಬಿಟ್ಟುಕೊಟ್ಟರು. ಮತ್ತೆರಡು ವಿಕೆಟ್‌ಗಳನ್ನು ಮೊಹಮ್ಮದ್‌ ಶಮಿ ಮತ್ತು ಭುವನೇಶ್ವರ್‌ ಕುಮಾರ್ ಹಂಚಿಕೊಂಡರು.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

3 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

4 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

6 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

7 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

10 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

10 hours ago