ಕ್ರೀಡೆ

ಟಿ20 ವಿಶ್ವಕಪ್‌ : ಭಾರತಕ್ಕೆ 160 ರನ್ ಗುರಿ ನೀಡಿದ ಪಾಕಿಸ್ತಾನ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು 159 ರನ್‌ ಕಲೆಹಾಕಿದೆ.

ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಟಿ20 ಮಾದರಿಯಲ್ಲಿ ವಿಶ್ವದ ಶ್ರೇಷ್ಠ ಆರಂಭಿಕ ಜೋಡಿಗಳಲ್ಲಿ ಒಂದೆನಿಸಿರುವ ಮೊಹಮ್ಮದ್‌ ರಿಜ್ವಾನ್‌ (4) ಹಾಗೂ ಬಾಬರ್‌ ಅಜಂ (0) ಪಾಕಿಸ್ತಾನಕ್ಕೆ ಕೈಕೊಟ್ಟರು.
ಯುವ ವೇಗಿ ಅರ್ಶದೀಪ್ ಸಿಂಗ್‌, ತಂಡದ ಮೊತ್ತ 15 ರನ್‌ ಆಗುವಷ್ಟರಲ್ಲಿಯೇ ಇವರಿಬ್ಬರಿಗೂ ಪೆವಿಲಿಯನ್‌ ದಾರಿ ತೋರಿದರು.ಆಸರೆಯಾದ ಮಸೂದ್, ಇಫ್ತಿಕರ್‌ ಈ ಹಂತದಲ್ಲಿ ಜೊತೆಯಾದ ಶಾನ್‌ ಮಸೂದ್‌ ಮತ್ತು ಇಫ್ತಿಕರ್‌ ಅಹಮದ್ ವಿಕೆಟ್ ಉರುಳುವಿಕೆಗೆ ತಡೆಯೊಡ್ಡಿದರು. ಆರಂಭದಲ್ಲಿ ರಕ್ಷಣಾತ್ಮಕವಾಗಿ ಆಡಿದ ಇವರಿಬ್ಬರು, ನಿಧಾನವಾಗಿ ರನ್‌ ಗತಿ ಹೆಚ್ಚಿಸಿದರು. ಈ ಜೋಡಿ ಮೂರನೇ ವಿಕೆಟ್‌ ಪಾಲುದಾರಿಕೆಯಲ್ಲಿ 76ರನ್ ಕಲೆಹಾಕಿತು.ಇಫ್ತಿಕರ್‌ 34 ಎಸೆತಗಳಲ್ಲಿ 4 ಸಿಕ್ಸರ್‌ 2 ಬೌಂಡರಿ ಸಹಿತ 51 ರನ್‌ ಗಳಿಸಿ ಔಟಾದರು. ಆದರೆ, ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ಕ್ರೀಸ್‌ಗೆ ಅಂಟಿಕೊಂಡು ಕೊನೆಯವರೆಗೂ ಆಡಿದ ಮಸೂದ್‌, ಕೆಳ ಕ್ರಮಾಂಕದ ಬ್ಯಾಟರ್‌ಗಳೊಂದಿಗೆ ರನ್‌ ಗತಿ ಹೆಚ್ಚಿಸುವ ಪ್ರಯತ್ನ ಮಾಡಿದರು.
42 ಎಸೆತಗಳನ್ನು ಎದುರಿಸಿದ ಮಸೂದ್‌, 52 ರನ್ ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 5 ಬೌಂಡರಿಗಳಿದ್ದವು.ಕೊನೆಯಲ್ಲಿ ಶಾಹಿನ್‌ ಅಫ್ರಿದಿ (16), ಮಸೂದ್‌ಗೆ ಉತ್ತಮ ಬೆಂಬಲ ನೀಡಿದರು. ಹೀಗಾಗಿ 159 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.ಭಾರತ ಪರ ಉತ್ತಮವಾಗಿ ಬೌಲಿಂಗ್‌ ಮಾಡಿದ ಅರ್ಶದೀಪ್‌ ಸಿಂಗ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ ಮೂರು ವಿಕೆಟ್‌ ಕಬಳಿಸಿದರು. ಇವರಿಬ್ಬರೂ ತಮ್ಮ ಪಾಲಿನ 4 ಓವರ್‌ಗಳಲ್ಲಿ ಕ್ರಮವಾಗಿ 32 ಮತ್ತು 30 ರನ್‌ ಬಿಟ್ಟುಕೊಟ್ಟರು. ಮತ್ತೆರಡು ವಿಕೆಟ್‌ಗಳನ್ನು ಮೊಹಮ್ಮದ್‌ ಶಮಿ ಮತ್ತು ಭುವನೇಶ್ವರ್‌ ಕುಮಾರ್ ಹಂಚಿಕೊಂಡರು.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

4 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

4 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

4 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

4 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago