ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಗೆದ್ದು ಎರಡನೇ ಬಾರಿಗೆ ಟೀ20 ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ(ಜೂ.30) ಬಹುಮಾನ ಘೋಷಿಸಿದೆ.
ಬಿಸಿಸಿಐ ಕಾರ್ಯದರ್ಶಿ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಲ್ ಅಧ್ಯಕ್ಷ ಜಯ್ ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ವಿಜೇತ ತಂಡಕ್ಕೆ ಬರೊಬ್ಬರಿ 125 ಕೋಟಿ ರೂ ಬಹುಮಾನ ಘೋಷಿಸಿ ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.
ಐಸಿಸಿ ಪುರುಷರ ಟೀ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲ ಆಟಗಾರರು, ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…