ಕ್ರೀಡೆ

ಟಿ 20 ವಿಶ್ವಕಪ್ 2024: ಯುಎಸ್‌ ಮಣಿಸಿ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಭಾರತ

ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕ್ರಿಕೆಟ್‌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಟಿ 20 ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತದ 25ನೇ ಪಂದ್ಯದಲ್ಲಿ ಭಾರತ ಯುಎಸ್‌ಎ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸುವ ಮೂಲಕ ಸೂಪರ್‌ 8 ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಯುಎಸ್‌ಎ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಯುಎಸ್‌ಎ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 110 ರನ್‌ ಕಲೆಹಾಕಿ ಭಾರತಕ್ಕೆ 111 ರನ್‌ಗಳ ಸುಲಭ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್‌ ಇಂಡಿಯಾ 18.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 111 ರನ್‌ಗಳನ್ನು ಕಲೆಹಾಕಿತು.

ಯುಎಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಶಯನ್‌ ಜಹಂಗೀರ್‌ ಗೋಲ್ಡನ್‌ ಡಕ್‌ಔಟ್‌ ಆದರೆ, ಸ್ಟೀವನ್‌ ಟೇಲರ್‌ 24 ರನ್‌ ಬಾರಿಸಿದರು. ಇನ್ನುಳಿದಂತೆ ಆಂಡ್ರೀಸ್‌ ಗೌಸ್‌ 2, ಆರನ್‌ ಜೋನ್ಸ್‌ 11, ಎನ್‌ಆರ್‌ ಕುಮಾರ್‌ 27, ಕೋರಿ ಆಂಡರ್‌ಸನ್‌ 15, ಹರ್ಮೀತ್‌ ಸಿಂಗ್‌ 10, ಜಸ್‌ದೀಪ್‌ ಸಿಂಗ್‌ 2 ಮತ್ತು ವಾನ್‌ ಚಾಕ್ವಿಕ್‌ ಅಜೇಯ 11 ರನ್‌ ದಾಖಲಿಸಿದರು.

ಯುಎಸ್‌ ಬೌಲರ್‌ಗಳನ್ನು ಕಾಡಿದ ಅರ್ಷ್‌ದೀಪ್‌ ಸಿಂಗ್‌ 4 ವಿಕೆಟ್‌, ಹಾರ್ದಿಕ್‌ ಪಾಂಡ್ಯ 2 ವಿಕೆಟ್‌ ಮತ್ತು ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದರು.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಸಹ ಕೇವಲ 3 (6) ರನ್‌ ಗಳಿಸಿದರು. ರಿಷಭ್‌ ಪಂತ್‌ 18 (20) ರನ್‌ ಗಳಿಸಿದರೆ, ಸೂರ್ಯಕುಮಾರ್‌ ಯಾದವ್‌ ಅಜೇಯ 50 (49) ರನ್‌ ಮತ್ತು ಶಿವಮ್‌ ದುಬೆ 31 (35) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಯುಎಸ್‌ ಪರ ಸೌರಭ್‌ ನೇತ್ರಾವಲ್ಕರ್‌ 2 ವಿಕೆಟ್‌ ಮತ್ತು ಅಲಿ ಖಾನ್‌ 1 ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಅರ್ಷ್‌ದೀಪ್‌ ಸಿಂಗ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

6 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

6 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

6 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

8 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

16 hours ago