ಕ್ರೀಡೆ

ಟಿ 20 ವಿಶ್ವಕಪ್ 2024: ಯುಎಸ್‌ ಮಣಿಸಿ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಭಾರತ

ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕ್ರಿಕೆಟ್‌ ಕೌಂಟಿ ಕ್ರೀಡಾಂಗಣದಲ್ಲಿ ನಡೆದ ಟಿ 20 ವಿಶ್ವಕಪ್‌ ಟೂರ್ನಿಯ ಲೀಗ್‌ ಹಂತದ 25ನೇ ಪಂದ್ಯದಲ್ಲಿ ಭಾರತ ಯುಎಸ್‌ಎ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಮಣಿಸುವ ಮೂಲಕ ಸೂಪರ್‌ 8 ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಯುಎಸ್‌ಎ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಯುಎಸ್‌ಎ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 110 ರನ್‌ ಕಲೆಹಾಕಿ ಭಾರತಕ್ಕೆ 111 ರನ್‌ಗಳ ಸುಲಭ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಟೀಮ್‌ ಇಂಡಿಯಾ 18.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 111 ರನ್‌ಗಳನ್ನು ಕಲೆಹಾಕಿತು.

ಯುಎಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಶಯನ್‌ ಜಹಂಗೀರ್‌ ಗೋಲ್ಡನ್‌ ಡಕ್‌ಔಟ್‌ ಆದರೆ, ಸ್ಟೀವನ್‌ ಟೇಲರ್‌ 24 ರನ್‌ ಬಾರಿಸಿದರು. ಇನ್ನುಳಿದಂತೆ ಆಂಡ್ರೀಸ್‌ ಗೌಸ್‌ 2, ಆರನ್‌ ಜೋನ್ಸ್‌ 11, ಎನ್‌ಆರ್‌ ಕುಮಾರ್‌ 27, ಕೋರಿ ಆಂಡರ್‌ಸನ್‌ 15, ಹರ್ಮೀತ್‌ ಸಿಂಗ್‌ 10, ಜಸ್‌ದೀಪ್‌ ಸಿಂಗ್‌ 2 ಮತ್ತು ವಾನ್‌ ಚಾಕ್ವಿಕ್‌ ಅಜೇಯ 11 ರನ್‌ ದಾಖಲಿಸಿದರು.

ಯುಎಸ್‌ ಬೌಲರ್‌ಗಳನ್ನು ಕಾಡಿದ ಅರ್ಷ್‌ದೀಪ್‌ ಸಿಂಗ್‌ 4 ವಿಕೆಟ್‌, ಹಾರ್ದಿಕ್‌ ಪಾಂಡ್ಯ 2 ವಿಕೆಟ್‌ ಮತ್ತು ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದರು.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್‌ ಕೊಹ್ಲಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ರೋಹಿತ್‌ ಶರ್ಮಾ ಸಹ ಕೇವಲ 3 (6) ರನ್‌ ಗಳಿಸಿದರು. ರಿಷಭ್‌ ಪಂತ್‌ 18 (20) ರನ್‌ ಗಳಿಸಿದರೆ, ಸೂರ್ಯಕುಮಾರ್‌ ಯಾದವ್‌ ಅಜೇಯ 50 (49) ರನ್‌ ಮತ್ತು ಶಿವಮ್‌ ದುಬೆ 31 (35) ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಯುಎಸ್‌ ಪರ ಸೌರಭ್‌ ನೇತ್ರಾವಲ್ಕರ್‌ 2 ವಿಕೆಟ್‌ ಮತ್ತು ಅಲಿ ಖಾನ್‌ 1 ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಅರ್ಷ್‌ದೀಪ್‌ ಸಿಂಗ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

21 hours ago