ಕ್ರೀಡೆ

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ ಆತಿಥೇಯತ್ವದಲ್ಲಿ ಆರಂಭವಾಗಲಿದೆ. ಟೂರ್ನಮೆಂಟ್ ಮಾರ್ಚ್ 8ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದ್ದು, ಒಟ್ಟು 55 ಪಂದ್ಯಗಳು ನಡೆಯಲಿವೆ. ಅಲ್ಲದೇ ಇದೇ ಮೊದಲ ಬಾರಿಗೆ 20 ತಂಡಗಳು ಭಾಗವಹಿಸುತ್ತಿವೆ.

ಭಾರತ ತನ್ನ ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಕಣಕ್ಕಿಳಿಯಲಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನ ತನ್ನ ಆರಂಭಿಕ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ.

ಪಂದ್ಯಾವಳಿಯ ಮೊದಲ ಪಂದ್ಯ ಫೆಬ್ರವರಿ 7ರಂದು ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಪಾಕಿಸ್ತಾನ ವಿರುದ್ಧ ನೆದರ್‌ಲ್ಯಾಂಡ್ಸ್ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗ್ರೂಪ್‌ನಲ್ಲಿರುವುದು ಗಮನಾರ್ಹ.

ಯಾವ ತಂಡ ಯಾವ ಗುಂಪಿನಲ್ಲಿದೇ?

ಗ್ರೂಪ್ A:
ಭಾರತ
ಪಾಕಿಸ್ತಾನ
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ
ನೆದರ್‌ಲ್ಯಾಂಡ್ಸ್,
ನಮೀಬಿಯಾ

ಗ್ರೂಪ್ B
ಆಸ್ಟ್ರೇಲಿಯಾ
ಶ್ರೀಲಂಕಾ
ಐರ್ಲೆಂಡ್,
ಜಿಂಬಾಬ್ವೆ
ಒಮಾನ್

ಗ್ರೂಪ್ C
ಇಂಗ್ಲೆಂಡ್
ವೆಸ್ಟ್ ಇಂಡೀಸ್
ನೇಪಾಳ,
ಇಟಲಿ,
ಸ್ಕಾಟ್‌ಲ್ಯಾಂಡ್

ಗ್ರೂಪ್ D
ನ್ಯೂಜಿಲೆಂಡ್
ದಕ್ಷಿಣ ಆಫ್ರಿಕಾ
ಅಫ್ಘಾನಿಸ್ತಾನ,
ಕೆನಡಾ,
ಯುನೈಟೆಡ್ ಅರಬ್ ಎಮಿರೇಟ್ಸ್

ಪಂದ್ಯಾವಳಿಯಲ್ಲಿ ಪ್ರತಿ ಗ್ರೂಪ್‌ನಲ್ಲಿ ತಂಡಗಳು ಒಮ್ಮೆ ಪರಸ್ಪರ ಆಡಲಿವೆ. ಪ್ರತಿ ಗ್ರೂಪ್‌ನ ಮೊದಲ ಎರಡು ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯಲಿವೆ. ಅಲ್ಲಿಂದ ಸೆಮಿಫೈನಲ್‌ಗೆ ಮುಂದುವರಿಯಲು ಟಾಪ್ ಎರಡು ತಂಡಗಳು ಸ್ಥಾನ ಪಡೆಯಲಿವೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

12 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

13 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

16 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago