ಕ್ರೀಡೆ

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ ಆತಿಥೇಯತ್ವದಲ್ಲಿ ಆರಂಭವಾಗಲಿದೆ. ಟೂರ್ನಮೆಂಟ್ ಮಾರ್ಚ್ 8ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದ್ದು, ಒಟ್ಟು 55 ಪಂದ್ಯಗಳು ನಡೆಯಲಿವೆ. ಅಲ್ಲದೇ ಇದೇ ಮೊದಲ ಬಾರಿಗೆ 20 ತಂಡಗಳು ಭಾಗವಹಿಸುತ್ತಿವೆ.

ಭಾರತ ತನ್ನ ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಕಣಕ್ಕಿಳಿಯಲಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನ ತನ್ನ ಆರಂಭಿಕ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ.

ಪಂದ್ಯಾವಳಿಯ ಮೊದಲ ಪಂದ್ಯ ಫೆಬ್ರವರಿ 7ರಂದು ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಪಾಕಿಸ್ತಾನ ವಿರುದ್ಧ ನೆದರ್‌ಲ್ಯಾಂಡ್ಸ್ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗ್ರೂಪ್‌ನಲ್ಲಿರುವುದು ಗಮನಾರ್ಹ.

ಯಾವ ತಂಡ ಯಾವ ಗುಂಪಿನಲ್ಲಿದೇ?

ಗ್ರೂಪ್ A:
ಭಾರತ
ಪಾಕಿಸ್ತಾನ
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ
ನೆದರ್‌ಲ್ಯಾಂಡ್ಸ್,
ನಮೀಬಿಯಾ

ಗ್ರೂಪ್ B
ಆಸ್ಟ್ರೇಲಿಯಾ
ಶ್ರೀಲಂಕಾ
ಐರ್ಲೆಂಡ್,
ಜಿಂಬಾಬ್ವೆ
ಒಮಾನ್

ಗ್ರೂಪ್ C
ಇಂಗ್ಲೆಂಡ್
ವೆಸ್ಟ್ ಇಂಡೀಸ್
ನೇಪಾಳ,
ಇಟಲಿ,
ಸ್ಕಾಟ್‌ಲ್ಯಾಂಡ್

ಗ್ರೂಪ್ D
ನ್ಯೂಜಿಲೆಂಡ್
ದಕ್ಷಿಣ ಆಫ್ರಿಕಾ
ಅಫ್ಘಾನಿಸ್ತಾನ,
ಕೆನಡಾ,
ಯುನೈಟೆಡ್ ಅರಬ್ ಎಮಿರೇಟ್ಸ್

ಪಂದ್ಯಾವಳಿಯಲ್ಲಿ ಪ್ರತಿ ಗ್ರೂಪ್‌ನಲ್ಲಿ ತಂಡಗಳು ಒಮ್ಮೆ ಪರಸ್ಪರ ಆಡಲಿವೆ. ಪ್ರತಿ ಗ್ರೂಪ್‌ನ ಮೊದಲ ಎರಡು ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯಲಿವೆ. ಅಲ್ಲಿಂದ ಸೆಮಿಫೈನಲ್‌ಗೆ ಮುಂದುವರಿಯಲು ಟಾಪ್ ಎರಡು ತಂಡಗಳು ಸ್ಥಾನ ಪಡೆಯಲಿವೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

9 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago