ಕ್ರೀಡೆ

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್‌ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್‌ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಕ್ವಿಂಟನ್ ಡಿ ಕಾಕ್ (59 ರನ್; 41 ಎಸೆತ) ಹಾಗೂ ರಯಾನ್ ರಿಕೆಲ್ಟನ್ (61 ರನ್; 28 ಎಸೆತ) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.

188 ರನ್‌ಗಳ ಗುರಿ ಬೆನ್ನತ್ತಿದ ಅಪ್ಘಾನಿಸ್ತಾನ ತಂಡದ ಇಬ್ರಾಹಿಂ ಜದ್ರಾನ್ ಹಾಗೂ ಗುಲ್ಬಾದಿನ್ ನೈಬ್ ಅವರ ವಿಕೆಟ್ ಪಡೆಯುವ ಮೂಲಕ ಲುಂಗಿ ಎನ್ಗಿಡಿ ಆಘಾತ ನೀಡಿದರು. ಆರಂಭಿಕ ರಹಮಾನುಲ್ಲಾ ಗುರ್ಬಾಜ್ 42 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಆಸರೆಯಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಳು ರನ್ ಗಳಿಸುವಲ್ಲಿ ವಿಫಲರಾದರು. ಆದರೆ, ಡೆತ್ ಓವರ್‌ನಲ್ಲಿ ನಾಯಕ ರಶೀದ್ ಖಾನ್ (20 ರನ್; 12 ಎಸೆತ) ಹಾಗೂ ನೂರ್ ಅಹಮ್ಮದ್ (15 ರನ್: 9 ಎಸೆತ) ಸ್ಪೋಟಕ ಆಟವಾಡುವ ಮೂಲಕ ತಂಡವನ್ನು ಗೆಲುವಿನಂಚಿಕೆ ತಂದರು. 3 ಎಸೆತಗಳಲ್ಲಿ 1 ರನ್ ಅಗತ್ಯವಿದ್ದಾಗ ಫಜಲ್ಹಕ್ ಫಾರೂಕಿ ರನ್ ಔಟ್ ಆಗುವ ಮೂಲಕ ಈ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಪಂದ್ಯ ಟೈ ಆಯಿತು.

ಮೊದಲ ಸೂಪರ್ ಓವರ್‌ನಲ್ಲಿ ಅಪ್ಘಾನಿಸ್ತಾನ ತಂಡ 17 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಕೂಡ ಅಷ್ಟೇ ರನ್ ಗಳಿಸಿದರು. ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ ಪರ ಮಿಲ್ಲರ್, ಕೇವಲ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 16 ರನ್ ಗಳಿಸಿದರು. ಒಟ್ಟು 23 ರನ್ ಬಾರಿಸಿದರು.

24 ರನ್ ಗುರಿ ಬೆನ್ನಟ್ಟಿದ ಅಪ್ಘಾನಿಸ್ತಾನ, ಎರಡನೇ ಎಸೆತದಲ್ಲೇ ನಬಿ ವಿಕೆಟ್ ಕಳೆದುಕೊಂಡಿತು. ಮಹಾರಾಜ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸುವ ಮೂಲಕ ಗುರ್ಬಾಜ್ ಅವರು ಪಂದ್ಯವನ್ನು ರೋಚಕ ಹಂತಕ್ಕೆ ತಲುಪಿಸಿದರು. ಆದರೆ, ಕೊನೆಯ ಎಸೆತದಲ್ಲಿ ಗುರ್ಬಾಜ್, ಮಿಲ್ಲರ್ಗೆ ಕ್ಯಾಚ್ ನೀಡುವ ಮೂಲಕ, ಅಪ್ಘಾನ್ ತಂಡವು 4 ರನ್‌ಗಳಿಂದ ಸೋಲನುಭವಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

9 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

10 hours ago