ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಕ್ವಿಂಟನ್ ಡಿ ಕಾಕ್ (59 ರನ್; 41 ಎಸೆತ) ಹಾಗೂ ರಯಾನ್ ರಿಕೆಲ್ಟನ್ (61 ರನ್; 28 ಎಸೆತ) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.
188 ರನ್ಗಳ ಗುರಿ ಬೆನ್ನತ್ತಿದ ಅಪ್ಘಾನಿಸ್ತಾನ ತಂಡದ ಇಬ್ರಾಹಿಂ ಜದ್ರಾನ್ ಹಾಗೂ ಗುಲ್ಬಾದಿನ್ ನೈಬ್ ಅವರ ವಿಕೆಟ್ ಪಡೆಯುವ ಮೂಲಕ ಲುಂಗಿ ಎನ್ಗಿಡಿ ಆಘಾತ ನೀಡಿದರು. ಆರಂಭಿಕ ರಹಮಾನುಲ್ಲಾ ಗುರ್ಬಾಜ್ 42 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಆಸರೆಯಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಳು ರನ್ ಗಳಿಸುವಲ್ಲಿ ವಿಫಲರಾದರು. ಆದರೆ, ಡೆತ್ ಓವರ್ನಲ್ಲಿ ನಾಯಕ ರಶೀದ್ ಖಾನ್ (20 ರನ್; 12 ಎಸೆತ) ಹಾಗೂ ನೂರ್ ಅಹಮ್ಮದ್ (15 ರನ್: 9 ಎಸೆತ) ಸ್ಪೋಟಕ ಆಟವಾಡುವ ಮೂಲಕ ತಂಡವನ್ನು ಗೆಲುವಿನಂಚಿಕೆ ತಂದರು. 3 ಎಸೆತಗಳಲ್ಲಿ 1 ರನ್ ಅಗತ್ಯವಿದ್ದಾಗ ಫಜಲ್ಹಕ್ ಫಾರೂಕಿ ರನ್ ಔಟ್ ಆಗುವ ಮೂಲಕ ಈ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಪಂದ್ಯ ಟೈ ಆಯಿತು.
ಮೊದಲ ಸೂಪರ್ ಓವರ್ನಲ್ಲಿ ಅಪ್ಘಾನಿಸ್ತಾನ ತಂಡ 17 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಕೂಡ ಅಷ್ಟೇ ರನ್ ಗಳಿಸಿದರು. ಎರಡನೇ ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ ಪರ ಮಿಲ್ಲರ್, ಕೇವಲ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 16 ರನ್ ಗಳಿಸಿದರು. ಒಟ್ಟು 23 ರನ್ ಬಾರಿಸಿದರು.
24 ರನ್ ಗುರಿ ಬೆನ್ನಟ್ಟಿದ ಅಪ್ಘಾನಿಸ್ತಾನ, ಎರಡನೇ ಎಸೆತದಲ್ಲೇ ನಬಿ ವಿಕೆಟ್ ಕಳೆದುಕೊಂಡಿತು. ಮಹಾರಾಜ ಬೌಲಿಂಗ್ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸುವ ಮೂಲಕ ಗುರ್ಬಾಜ್ ಅವರು ಪಂದ್ಯವನ್ನು ರೋಚಕ ಹಂತಕ್ಕೆ ತಲುಪಿಸಿದರು. ಆದರೆ, ಕೊನೆಯ ಎಸೆತದಲ್ಲಿ ಗುರ್ಬಾಜ್, ಮಿಲ್ಲರ್ಗೆ ಕ್ಯಾಚ್ ನೀಡುವ ಮೂಲಕ, ಅಪ್ಘಾನ್ ತಂಡವು 4 ರನ್ಗಳಿಂದ ಸೋಲನುಭವಿಸಿತು.
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…