ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಕ್ವಿಂಟನ್ ಡಿ ಕಾಕ್ (59 ರನ್; 41 ಎಸೆತ) ಹಾಗೂ ರಯಾನ್ ರಿಕೆಲ್ಟನ್ (61 ರನ್; 28 ಎಸೆತ) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.
188 ರನ್ಗಳ ಗುರಿ ಬೆನ್ನತ್ತಿದ ಅಪ್ಘಾನಿಸ್ತಾನ ತಂಡದ ಇಬ್ರಾಹಿಂ ಜದ್ರಾನ್ ಹಾಗೂ ಗುಲ್ಬಾದಿನ್ ನೈಬ್ ಅವರ ವಿಕೆಟ್ ಪಡೆಯುವ ಮೂಲಕ ಲುಂಗಿ ಎನ್ಗಿಡಿ ಆಘಾತ ನೀಡಿದರು. ಆರಂಭಿಕ ರಹಮಾನುಲ್ಲಾ ಗುರ್ಬಾಜ್ 42 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಆಸರೆಯಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಳು ರನ್ ಗಳಿಸುವಲ್ಲಿ ವಿಫಲರಾದರು. ಆದರೆ, ಡೆತ್ ಓವರ್ನಲ್ಲಿ ನಾಯಕ ರಶೀದ್ ಖಾನ್ (20 ರನ್; 12 ಎಸೆತ) ಹಾಗೂ ನೂರ್ ಅಹಮ್ಮದ್ (15 ರನ್: 9 ಎಸೆತ) ಸ್ಪೋಟಕ ಆಟವಾಡುವ ಮೂಲಕ ತಂಡವನ್ನು ಗೆಲುವಿನಂಚಿಕೆ ತಂದರು. 3 ಎಸೆತಗಳಲ್ಲಿ 1 ರನ್ ಅಗತ್ಯವಿದ್ದಾಗ ಫಜಲ್ಹಕ್ ಫಾರೂಕಿ ರನ್ ಔಟ್ ಆಗುವ ಮೂಲಕ ಈ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಪಂದ್ಯ ಟೈ ಆಯಿತು.
ಮೊದಲ ಸೂಪರ್ ಓವರ್ನಲ್ಲಿ ಅಪ್ಘಾನಿಸ್ತಾನ ತಂಡ 17 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಕೂಡ ಅಷ್ಟೇ ರನ್ ಗಳಿಸಿದರು. ಎರಡನೇ ಸೂಪರ್ ಓವರ್ನಲ್ಲಿ ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ ಪರ ಮಿಲ್ಲರ್, ಕೇವಲ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 16 ರನ್ ಗಳಿಸಿದರು. ಒಟ್ಟು 23 ರನ್ ಬಾರಿಸಿದರು.
24 ರನ್ ಗುರಿ ಬೆನ್ನಟ್ಟಿದ ಅಪ್ಘಾನಿಸ್ತಾನ, ಎರಡನೇ ಎಸೆತದಲ್ಲೇ ನಬಿ ವಿಕೆಟ್ ಕಳೆದುಕೊಂಡಿತು. ಮಹಾರಾಜ ಬೌಲಿಂಗ್ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸುವ ಮೂಲಕ ಗುರ್ಬಾಜ್ ಅವರು ಪಂದ್ಯವನ್ನು ರೋಚಕ ಹಂತಕ್ಕೆ ತಲುಪಿಸಿದರು. ಆದರೆ, ಕೊನೆಯ ಎಸೆತದಲ್ಲಿ ಗುರ್ಬಾಜ್, ಮಿಲ್ಲರ್ಗೆ ಕ್ಯಾಚ್ ನೀಡುವ ಮೂಲಕ, ಅಪ್ಘಾನ್ ತಂಡವು 4 ರನ್ಗಳಿಂದ ಸೋಲನುಭವಿಸಿತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…