ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ ಗೆಲುವು ಸಾಧಿಸಿದೆ.
ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡವು, ನಾಯಕ ರಿಚೀ ಬೆರಿಂಗ್ಟನ್ (49 ರನ್: 32 ಎಸೆತ) ಅವರ ಬ್ಯಾಟಿಂಗ್ ನೆರವಿನಿಂದ 19.4 ಓವರ್ಗಳಲ್ಲಿ 152 ರನ್ ಗಳಿಸಿತು. 153 ರನ್ ಗುರಿ ಬೆನ್ನಟಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿತು. ಫಿಲ್ ಸಾಲ್ಟ್ (2 ರನ್), ಜೋಸ್ ಬಟ್ಲರ್ (3 ರನ್) ವೈಫಲ್ಯ ಅನುಭವಿಸಿದರು. 13 ರನ್ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಜಾಕೋಬ್ ಬೆಥೆಲ್ (32 ರನ್; 28 ಎಸೆತ) ಹಾಗೂ ಟಾಮ್ ಬಾಥಮ್ (63 ರನ್; 41 ಎಸೆತ) ಆಸರೆಯಾದರು.
ಹ್ಯಾರಿ ಬ್ರೂಕ್ ಪಡೆಯು 18.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇಂಗ್ಲೆಂಡ್ ಪರ ಆದಿಲ್ ರಶೀದ್ 3 ವಿಕೆಟ್ ಪಡೆದು ಮಿಂಚಿದರು. ಇಂಗ್ಲೆಂಡ್ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸುವ ಮೂಲಕ 4 ಪಾಯಿಂಟ್ಗಳೊಂದಿಗೆ ಸಿ ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿತು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…