ಕ್ರೀಡೆ

ಟಿ20 ವಿಶ್ವಕಪ್‌: ಕೊನೆಯ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಫೀಲ್ಡಿಂಗ್‌ ಆಯ್ಕೆ

ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ. ಕಾಕತಾಳಿಯವೆಂದರೆ 1992ರ ವಿಶ್ವಕಪ್​ನಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಟಿ20 ಚಾಂಪಿಯನ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಟಾಸ್ ಗೆದ್ದ ನಂತರ, ಬಾಬರ್ ಅಜಮ್ ಮತ್ತು ಜೋಸ್ ಬಟ್ಲರ್ ತಮ್ಮ ತಮ್ಮ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿತ್ತು. ಹಾಗೆಯೇ ಇಂಗ್ಲೆಂಡ್ ಕೂಡ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಈಗ ಎರಡೂ ತಂಡಗಳಲ್ಲಿ ಯಾರು ಗೆದ್ದರೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದ್ದಾರೆ.

ಅಂತಿಮ ಕದನಕ್ಕೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ-ಫೈನಲ್ ಗೆಲುವಿನ ಸಂಯೋಜನೆಯೊಂದಿಗೆ ಅಂತಿಮ ಮೈದಾನವನ್ನು ಆಡಲು ಎರಡೂ ತಂಡಗಳು ಮೆಲ್ಬೋರ್ನ್‌ ಮೈದಾನದಲ್ಲಿ ಕಾಲಿಟ್ಟಿದ್ದಾರೆ.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago