ಕ್ರೀಡೆ

ಟಿ 20 ವಿಶ್ವ ಕಪ್ : ಭಾರತದ ಗೆಲುವಿಗೆ ಕ್ರಿಕೆಟ್ ಪ್ರೇಮಿಗಳಿಂದ ಸಂಭ್ರಮಾಚರಣೆ

ಮೈಸೂರು : ಟಿ ಟ್ವೆಂಟಿ ವಿಶ್ವಕಪ್  ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿ ಅವರ ಅಭೂತಪೂರ್ವ ಪ್ರದರ್ಶನ ಗಮನ ಸೆಳೆಯಿತು. ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ದೀಪಾವಳಿಯ ಗೆಲುವಿನ ಮೂಲಕ ಉಡುಗೊರೆಯನ್ನು ನೀಡಿರುವುದು ನಮಗೆ ಸಂತಸದ ವಿಚಾರ ಎಂದು ಕ್ರಿಕೆಟ್ ಪ್ರೇಮಿಗಳು ಹೇಳಿದರು.

ಸಂಭ್ರಮಾಚರಣೆಯಲ್ಲಿ ಬಸವರಾಜ್, ಮಧು ಎನ್ ಪೂಜಾರ್, ಬಸಪ್ಪ, ಜೆಡಿಎಸ್ ಮುಖಂಡರಾದ ಯದುನಂದ, ಅನಿಲ್ ಕುಮಾರ್, ಮಂಜುನಾಥ್, ನಂದೀಶ್, ಹೊಯ್ಸಳ ರಂಗನಾಥ್, ಸುರೇಶ್, ಸುಚೇಂದ್ರ, ನವೀನ್ ಕೆಂಪಿ, ತೀರ್ಥ ಕುಮಾರ್, ಮಂಜಪ್ಪ, ಅಹಿಂದ ನಟರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

 

 

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

4 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

5 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

19 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

20 hours ago