ಕ್ರೀಡೆ

ಟಿ20 ವಿಶ್ವಕಪ್ ಆಂಗ್ಲರ ಎದುರು ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.

ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್‌ ಆರಂಭಿಕರಾದ ಜೋಸ್‌ ಬಟ್ಲರ್‌ (80) ಮತ್ತು ಅಲೆಕ್ಸ್‌ ಹೇಲ್ಸ್‌ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.

ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್‌ ಕೇವಲ ಐದು ರನ್‌ ಗಳಿಸಿ ಔಟಾದರೆ, ನಾಯಕ ರೋಹಿತ್‌ ಶರ್ಮಾ28 ಬಾಲ್‌ ಗಳಲ್ಲಿ27 ರನ್‌ ಗಳಿಸಿ ಔಟಾದರು.

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.

andolana

Recent Posts

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

14 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

51 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

1 hour ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

1 hour ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

2 hours ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

2 hours ago