ಕ್ರೀಡೆ

ಟಿ20 ವಿಶ್ವಕಪ್ ಆಂಗ್ಲರ ಎದುರು ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.

ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್‌ ಆರಂಭಿಕರಾದ ಜೋಸ್‌ ಬಟ್ಲರ್‌ (80) ಮತ್ತು ಅಲೆಕ್ಸ್‌ ಹೇಲ್ಸ್‌ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.

ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್‌ ಕೇವಲ ಐದು ರನ್‌ ಗಳಿಸಿ ಔಟಾದರೆ, ನಾಯಕ ರೋಹಿತ್‌ ಶರ್ಮಾ28 ಬಾಲ್‌ ಗಳಲ್ಲಿ27 ರನ್‌ ಗಳಿಸಿ ಔಟಾದರು.

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

6 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

6 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

7 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

7 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

7 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

8 hours ago