ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.
ಅಡಿಲೇಡ್ ನಲ್ಲಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್ ಆರಂಭಿಕರಾದ ಜೋಸ್ ಬಟ್ಲರ್ (80) ಮತ್ತು ಅಲೆಕ್ಸ್ ಹೇಲ್ಸ್ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.
ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್ ಕೇವಲ ಐದು ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ28 ಬಾಲ್ ಗಳಲ್ಲಿ27 ರನ್ ಗಳಿಸಿ ಔಟಾದರು.
ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.
ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…