ಕ್ರೀಡೆ

ಟಿ20 ವಿಶ್ವಕಪ್ ಆಂಗ್ಲರ ಎದುರು ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.

ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್‌ ಆರಂಭಿಕರಾದ ಜೋಸ್‌ ಬಟ್ಲರ್‌ (80) ಮತ್ತು ಅಲೆಕ್ಸ್‌ ಹೇಲ್ಸ್‌ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.

ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್‌ ಕೇವಲ ಐದು ರನ್‌ ಗಳಿಸಿ ಔಟಾದರೆ, ನಾಯಕ ರೋಹಿತ್‌ ಶರ್ಮಾ28 ಬಾಲ್‌ ಗಳಲ್ಲಿ27 ರನ್‌ ಗಳಿಸಿ ಔಟಾದರು.

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.

andolana

Recent Posts

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

2 mins ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

54 mins ago

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 hour ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

2 hours ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

3 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

3 hours ago