Mysore
19
few clouds

Social Media

ಗುರುವಾರ, 05 ಫೆಬ್ರವರಿ 2026
Light
Dark

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಟಿ-20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ. ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ಎಂದು ಹೇಳಿದ್ದಾರೆ.

ಎಲ್ಲಾ ದೃಷ್ಟಿಯಿಂದ ಪರಾಮರ್ಶೆ ಮಾಡಿದ ನಂತರವೇ ಭಾರತದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಶೆಹಬಾಜ್ ಷರೀಫ್ ಹೇಳಿದ್ದಾರೆ.

ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಎಲ್ಲ ನಿಟ್ಟಿನಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಇದು ಸೂಕ್ತ ನಿರ್ಧಾರ ಎಂದೂ ತಿಳಿಸಿದ್ದಾರೆ.

ಬಾಂಗ್ಲಾದೇಶ ತಂಡ ಐಸಿಸಿ ಟಿ-20 ವಿಶ್ವಕಪ್‌ನಿಂದ ಹೊರ ನಡೆಯುತ್ತಿದ್ದಂತೆ ಪಾಕಿಸ್ತಾನ ತನ್ನ ಹೊಸ ನಾಟಕ ಆರಂಭಿಸಿತು. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಟಿ-20 ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಯಾಣ ಬೆಳೆಸುವುದಿಲ್ಲ ಎಂದು ತಿಳಿಸಿತ್ತು. ಅಲ್ಲದೆ ತನ್ನ ಗುಂಪು ಹಾಗೂ ಸ್ಥಳವನ್ನು ಬದಲಿಸುವಂತೆ ಐಸಿಸಿಗೆ ಬೇಡಿಕೆ ಇಟ್ಟಿತ್ತು. ಆದರೆ ಐಸಿಸಿ ಈ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಅಲ್ಲದೆ ಬಾಂಗ್ಲಾದೇಶವನ್ನು ಟಿ-20 ವಿಶ್ವಕಪ್‌ನಿಂದ ಹೊರಗಿಡಲಾಯಿತು.

ಬಾಂಗ್ಲಾದೇಶಕ್ಕೆ ಬೆಂಬಲವಾಗಿ ಪಾಕಿಸ್ತಾನ ಟೂರ್ನಿಯನ್ನು ಬಾಯ್ಕಟ್ ಮಾಡುವುದಾಗಿ ಈ ಮೊದಲು ಸುದ್ದಿಗಳು ಹೊರ ಬಂದಿದ್ದವು. ಆ ಬಳಿಕ ಪಾಕಿಸ್ತಾನ ಸರ್ಕಾರ ಯಾವುದೇ ಕಾರಣವನ್ನು ನೀಡದೇ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಅಂಗಳಕ್ಕೆ ಇಳಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು.

ನಂತರ ಸ್ಪಷ್ಟನೆ ನೀಡಿದ್ದ ಪಾಕಿಸ್ತಾನ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆ. ಆದರೆ, ಭಾರತದ ವಿರುದ್ಧ ಲೀಗ್ ಹಂತದ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿತ್ತು.

Tags:
error: Content is protected !!