ಕ್ರೀಡೆ

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಟಿ-20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ. ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ಎಂದು ಹೇಳಿದ್ದಾರೆ.

ಎಲ್ಲಾ ದೃಷ್ಟಿಯಿಂದ ಪರಾಮರ್ಶೆ ಮಾಡಿದ ನಂತರವೇ ಭಾರತದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಶೆಹಬಾಜ್ ಷರೀಫ್ ಹೇಳಿದ್ದಾರೆ.

ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಎಲ್ಲ ನಿಟ್ಟಿನಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಇದು ಸೂಕ್ತ ನಿರ್ಧಾರ ಎಂದೂ ತಿಳಿಸಿದ್ದಾರೆ.

ಬಾಂಗ್ಲಾದೇಶ ತಂಡ ಐಸಿಸಿ ಟಿ-20 ವಿಶ್ವಕಪ್‌ನಿಂದ ಹೊರ ನಡೆಯುತ್ತಿದ್ದಂತೆ ಪಾಕಿಸ್ತಾನ ತನ್ನ ಹೊಸ ನಾಟಕ ಆರಂಭಿಸಿತು. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಟಿ-20 ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಯಾಣ ಬೆಳೆಸುವುದಿಲ್ಲ ಎಂದು ತಿಳಿಸಿತ್ತು. ಅಲ್ಲದೆ ತನ್ನ ಗುಂಪು ಹಾಗೂ ಸ್ಥಳವನ್ನು ಬದಲಿಸುವಂತೆ ಐಸಿಸಿಗೆ ಬೇಡಿಕೆ ಇಟ್ಟಿತ್ತು. ಆದರೆ ಐಸಿಸಿ ಈ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಅಲ್ಲದೆ ಬಾಂಗ್ಲಾದೇಶವನ್ನು ಟಿ-20 ವಿಶ್ವಕಪ್‌ನಿಂದ ಹೊರಗಿಡಲಾಯಿತು.

ಬಾಂಗ್ಲಾದೇಶಕ್ಕೆ ಬೆಂಬಲವಾಗಿ ಪಾಕಿಸ್ತಾನ ಟೂರ್ನಿಯನ್ನು ಬಾಯ್ಕಟ್ ಮಾಡುವುದಾಗಿ ಈ ಮೊದಲು ಸುದ್ದಿಗಳು ಹೊರ ಬಂದಿದ್ದವು. ಆ ಬಳಿಕ ಪಾಕಿಸ್ತಾನ ಸರ್ಕಾರ ಯಾವುದೇ ಕಾರಣವನ್ನು ನೀಡದೇ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಅಂಗಳಕ್ಕೆ ಇಳಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು.

ನಂತರ ಸ್ಪಷ್ಟನೆ ನೀಡಿದ್ದ ಪಾಕಿಸ್ತಾನ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆ. ಆದರೆ, ಭಾರತದ ವಿರುದ್ಧ ಲೀಗ್ ಹಂತದ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago