ಕ್ರೀಡೆ

T20 World Cup : ಪಾಕ್ ಎದುರು ಭಾರತಕ್ಕೆ ಜಯ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು.

ಇಲ್ಲಿನ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159ರನ್‌ ಕಲೆಹಾಕಿತ್ತು. ಶಾನ್‌ ಮಸೂದ್‌ (ಔಟಾಗದೆ 52 ರನ್) ಮತ್ತು ಇಫ್ತಿಕರ್‌ ಅಹಮದ್ (51 ರನ್) ಅರ್ಧಶತಕ ಸಿಡಿಸಿ ಮಿಂಚಿದ್ದರು. ಈ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮಾ (4) ಹಾಗೂ ಉಪನಾಯಕ ಕೆ.ಎಲ್‌.ರಾಹುಲ್‌ (4) ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡರು.

ಬಳಿಕ ಬಂದ ಸೂರ್ಯಕುಮಾರ್‌ ಯಾದವ್‌ (15) ಮತ್ತು ಅಕ್ಷರ್ ಪಟೇಲ್‌ (2) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಕೇವಲ 31 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೊಹ್ಲಿ ಮತ್ತು ಪಾಂಡ್ಯ, ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದರು. ನಿಧಾನವಾಗಿ ರನ್‌ ಗತಿಯನ್ನೂ ಹೆಚ್ಚಿಸಿ 5ನೇ ವಿಕೆಟ್ ಪಾಲುದಾರಿಕೆಯಲ್ಲಿ 113 ರನ್‌ಗಳ ಕಲೆಹಾಕಿದರು. ಕೊನೇ ಓವರ್‌ನ ಮೊದಲ ಎಸೆತದಲ್ಲಿ ಪಾಂಡ್ಯ ಔಟಾದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago